ಹಾವೇರಿ: ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ಎರಡು ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಸೋಂಕಿತನ ಸಂಪರ್ಕದಲ್ಲಿದ್ದ ಇತರರ ವರದಿಗಾಗಿ  ಜಿಲ್ಲಾಡಳಿತ ಕಾಯುತ್ತಿದೆ. ಇನ್ನು ಸೀಲ್ ಡೌನ್ ವಿರೋಧಿಸಿ ಎಸ್.ಎಂ ಕೃಷ್ಣ ಬಡಾವಣೆಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಇಲ್ಲಿನ ಎಸ್.ಎಂ ಕೃಷ್ಣ ಬಡಾವಣೆಯಲ್ಲಿ ಸೋಂಕು‌ ಹರಡದಿರಲು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು ಲಾಕ್ ಡೌನ್ ಹಿನ್ನೆಲೆಯಲ್ಲಿ ತರಕಾರಿ ಹಾಗೂ ದಿನಸಿ ವಸ್ತುಗಳ ಖರೀದಿಗಾಗಿ ಸಾಲ ಮಾಡಿಕೊಂಡಿದ್ದೇವೆ. ಕಳೆದ 40 ದಿನಗಳಿಂದ ಕೂಲಿ ಕೆಲಸವಿಲ್ಲ ವಿಷ ಸೇವಿಸಲು ದುಡ್ಡಿಲ್ಲ. ಜಿಲ್ಲಾಡಳಿತ ದಿನನಿತ್ಯ ದಿನಸಿ ವಸ್ತುಗಳನ್ನು ಪುಕ್ಕಟೆಯಾಗಿ ನೀಡಬೇಕು, ಇಲ್ಲವಾದಲ್ಲಿ ನಮ್ಮನ್ನು ಸೀಲ್ ಡೌನ್ ಪ್ರದೇಶದಿಂದ ಮುಕ್ತಗೊಳಿಸಿ ಎಂದು ಒತ್ತಾಯಿಸಿದರು. ಈ ವೇಳೆ ಮದ್ಯ ಪ್ರವೇಶಿಸಿದ ಜಿಲ್ಲಾಧಿಕಾರಿಗಳು ಉಚಿತವಾಗಿ ದಿನನಿತ್ಯ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿದರು. ಡಿಸಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.

Leave a Reply

Your email address will not be published. Required fields are marked *

You May Also Like

ನನ್ನ ಮಗ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ – ಹುತಾತ್ಮ ಯೋಧನ ತಂದೆ!

ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.

ಸಾವರಕರ್ ಬದಲಾಗಿ ರಾಹುಲ್, ಸೋನಿಯಾಗಾಂಧಿ ಹೆಸರಿಡಬೇಕಾ?: ಸಿ.ಸಿ.ಪಾಟೀಲ್

ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ,…

ಗೋವಾದಿಂದ ಬಂದ ಕೂಲಿ ಕಾರ್ಮಿಕ: ಕೊರೊನಾ ಸೋಂಕಿನಿಂದ ಸಾವು!

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ…

ಬೀಜ, ಗೊಬ್ಬರ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ : ಸಚಿವ ಸಿ.ಸಿ.ಪಾಟೀಲ್

ಈಗಾಗಲೇ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಉತ್ತಮ ಮುಂಗಾರಿನ ನಿರೀಕ್ಷೆ ಇದೆ. ಕಳ್ಳ ಸಂತೆಯಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.