ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 20 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 693 ತಲುಪಿದ್ದು 354 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 309 ಪ್ರಕರಣಗಳಲ್ಲಿ 303 ಮಂದಿ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  66 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ 29 ಮಂದಿ ಅಸುನೀಗಿದ್ದಾರೆ. ಹೊಸದಾಗಿ ಪತ್ತೆಯಾಗಿರುವ ಪ್ರಕರಣದಲ್ಲಿ ಬಾಗಲಕೋಟೆಯಲ್ಲಿ 13 ಪ್ರಕರಣಗಳು ಕಂಡುಬಂದಿದ್ದು ದಕ್ಷಿಣ ಕನ್ನಡದಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿ ಎರಡು ಮತ್ತು ಕಲಬುರಗಿ ಹಾಗೂ ವಿಜಯಪುರದಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆಯೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿ ಅಸ್ವಸ್ಥ

ಗ್ರಾಮ ಪಂಚಾಯತ್ ಚುನಾವಣೆಯ‌ ಮತ ಎಣಿಕೆ ಹಿನ್ನೆಲೆ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದ ಅಭ್ಯರ್ಥಿ ಅಸ್ವಸ್ಥಗೊಮಡ ಘಟನೆ ಹಾವೇರಿಯಲ್ಲಿ ನಡೆದಿದೆ.

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.