ರಾಜ್ಯದಲ್ಲಿನ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಕುರಿತು ನಾಳೆ ಸಾಮಾಜಿಕ ಜಾಲತಾಣಗಳ ಮೂಲಕ ಹ್ಯಾಶ್ ಟ್ಯಾಗ್ ಪ್ರತಿಭಟನೆಗೆ ರಾಜ್ಯದ ಜನಪರ,ರೈತಪರ,ಕಾರ್ಮಿಕ ಹಾಗೂ ಜೀವಪರ ಸಂಘಟನೆಗಳು ಮುಂದಾಗಿವೆ. ಪೋಸ್ಟರ್ ಪ್ರತಿಭಟನೆಯ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಶ್ ಟ್ಯಾಗ್ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸಕ್ಕೆ ಸಂಘಟನೆಗಳು ಮುಂದಾಗಿವೆ. ಈ ಕುರಿತಾದ ನಾಳೆಯ ಪ್ರತಿಭಟನೆಗೆ ವಿವಿಧ ಕಾರ್ಮಿಕ ಹಾಗೂ ಜೀವಪರ ಸಂಘಟನೆಗಳು ಜನರಲ್ಲಿ ಮಾಡಿಕೊಂಡ ಮನವಿ ಇಲ್ಲಿದೆ ನೋಡಿ..

ಸ್ನೇಹಿತರೆ…

ಕರ್ನಾಟಕ ಸರ್ಕಾರ ಬಿಲ್ಡರ್ ಲಾಬಿಯಾ ಒತ್ತಡಕ್ಕೆ ಒಳಗಾಗಿ, ವಲಸೆ ಕಾರ್ಮಿಕರನ್ನು, ಅವರ ಹಕ್ಕುಗಳನ್ನು ಬಲಿ ಕೊಡಲು ಹೊರಟಿದೆ.
ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ. ಇದು ಜೀತದ ಪದ್ಧತಿ ಇದ್ದಂತೆ. ಇದು ಸಂವಿಧಾನದ ಅನುಚ್ಛೇದ 23 ರ ಉಲ್ಲಂಘನೆ. ಹೀಗಾಗಿ ಕರ್ನಾಟಕದ ಜನರೆಲ್ಲ ಇದನ್ನು ವಿರೋಧಿಸಬೇಕೆಂದು ಕರೆ ನೀಡುತ್ತಿದ್ದೇವೆ.

ನಾಳೆ ಬೆಳಗ್ಗೆ (ಗುರುವಾರ 07 ಮೇ) , 9 ಘಂಟೆಗೆ ದಯವಿಟ್ಟು ನಿಮ್ಮ ನಿಮ್ಮ ಮನೆಗಳ ಮುಂದೆ ಪ್ಲಕಾರ್ಡ್ ಗಳು ಹಿಡಿದು ವಲಸಕ್ಕಿ ಕಾರ್ಮಿಕರಿಗೆ ಸಾಥ್ ನೀಡಿ. ಮನೆಗೆ ಹೋಗುವುದು, ಪ್ರತಿ ಕಾರ್ಮಿಕರ ಹಕ್ಕು. ಆ ಹಕ್ಕನ್ನು ಉಲ್ಲಂಘಿಸುವ ಬದಲು, ಆ ಹಕ್ಕನ್ನು ಪೂರೈಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕೋಣ.

ನಾಳೆ ಬೆಳಗ್ಗೆ 10 ಘಂಟೆಯಿಂದ ಮಧ್ಯಾಹ್ನ 12 ಘಂಟೆಯವರೆಗೆ, ಟ್ವಿಟ್ಟರ್ ಸ್ಟಾರ್ಮ್ ನಲ್ಲಿ ಸಹ ಭಾಗವಹಿಸಿ. #trainsformigrantsnow ಹಾಗೂ #ವಲಸಿಗರಿಗೆ ರೈಲು ನೀಡಿ ಎನ್ನುವ ಹ್ಯಾಶ ಟ್ಯಾಗ್ ಉಪಯೋಗಿಸಿ. ಹಾಗೆಯೇ ಈ ಅನ್ಯಾಯದ ವಿರುದ್ಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಿರಿ – cm@karnataka.gov.in ಎಂದು ಕರೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಚಂಡಮಾರುತ ಎಲ್ಲಿ ಅಪ್ಪಳಿಸಲಿದೆ ಅಂತ ಹೇಳಿದೆ ಹವಾಮಾನ ಇಲಾಖೆ..!

ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬಾಧಿಸಲಿದೆ. ಈಗಾಗಲೇ ಗುಜಾರಾತ್ ಮತ್ತು ಮಹಾರಾಷ್ಟ್ರದೆಡೆಗೆ ಚಂಡಮಾರುತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.