ಬೆಂಗಳೂರು: ವಲಸಿಗರು, ಕೂಲಿ ಕಾರ್ಮಿಕರನ್ನು ಊರುಗಳಿಗೆ ತಲುಪಿಸಲು ಕಾರ್ಯಾಚರಣೆಗೊಳಿಸುತ್ತಿರುವ ಬಸ್ಗಳ ಸೇವೆ ಮೇ. 8 ರಿಂದ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಕಳೆದ ಐದು ದಿನಗಳಿಂದ ಬೆಂಗಳೂರು ಮತ್ತು ರಾಜ್ಯದ ನಾನಾ ಭಾಗಗಳಿಂದ 3,500 ಬಸ್ಗಳನ್ನು ಕಾರ್ಯಾಚರಣೆಗೊಳಿಸಿ, 1 ಲಕ್ಷಕ್ಕೂ ಅಧಿಕ ಜನರನ್ನು ತವರಿಗೆ ಮರಳಿಸಲಾಗಿದೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆಯ ದಿನವಾಗಿದ್ದು, ಮೇ. 8ರಿಂದ ಬಸ್ ಸೇವೆಯನ್ನು ನಿಲ್ಲಿಸಲಾಗಿದೆ.
ಅಲ್ಲದೇ, ಮೂರ್ನಾಲ್ಕು ದಿನಗಳಲ್ಲಿ ಸಿಬ್ಬಂದಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.