ನವದೆಹಲಿ: ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿಯೂ ಸೋಂಕಿತರ ಸಂಖ್ಯೆ 50 ಸಾವಿರ ಗಡಿಗೆ ಬಂದು ನಿಂತಿದೆ.
ಜಗತ್ತಿನಾದ್ಯಂತ 37 ಲಕ್ಷಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ 12.41 ಲಕ್ಷ ಜನರನ್ನು ಇದು ಬಲಿ ಪಡೆದಿದೆ. ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 49,400ಕ್ಕೆ ಏರಿಕೆ ಕಂಡಿದೆ. ಈ ಪೈಕಿ 1,693 ಜನ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಭಾರತ ಸದ್ಯ 15ನೇ ಸ್ಥಾನದಲ್ಲಿದೆ.

ಅಮೆರಿಕದಲ್ಲಿ ಅತೀ ಹೆಚ್ಚು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿ 12.37 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 72,200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸ್ಪೇನ್ ನಲ್ಲಿ 2.50 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 25,600ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಇಟಲಿಯಲ್ಲಿ 2.13 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 29,300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಯುಕೆಯಲ್ಲಿ 1.94 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 29,400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ಶಾರ್ಪ್ ಶೂಟರ್ ವಿಚಾರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು!

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ…

ಗ್ರಾಪಂ ಚುನಾವಣೆ : ಮತಗಟ್ಟೆ ಅಧಿಕಾರಿ ನೇಮಕಕ್ಕೆ ನಿಯಮಗಳು

ವಿದ್ಯುತ್ ಸರಬರಾಜು ಕಂಪನಿಗಳ ಖಾಸಗಿಕರಣ ಸಂಬಂಧ ಕೇಂದ್ರ ಇಂಧನ ಮಂತ್ರಾಲಯವು ಹೊರಡಿಸಿರುವ ಕರಡು(Standard bidding Documents) ಅಭಿಪ್ರಾಯ ನೀಡುವ ಕುರಿತು ಈ ಬಗ್ಗೆ ಕುಲಂಕುಶವಾಗಿ ಪರಿಶೀಲಿಸಿ ಈ ವಿಷಯವನ್ನು ಪರಿಗಣಿಸಿ, ಎಲ್ಲ ವಿದ್ಉತ್ ಸರಬರಾಜು ಕಂಪನಿಗಳು ಮತ್ತು ಕೆಪಿಟಿಸಿಎಲ್ ರವರಿಂದ ಅಭಿಪ್ರಾಯವನ್ನು ಪಡೆದು ದಿನಾಂಕ 01-10-2020 ರೊಳಗೆ ಕ್ರೂಢಿಕೃತ ಅಭಿಪ್ರಾಯವನ್ನು ಇಂಧನ ಇಲಾಖೆಗೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಇಂಧನ ಇಲಾಖೆಯ ಸರ್ಕಾರದ ಅಧಿನ ಕಾರ್ಯದರ್ಶಿ ಎನ್.ಮಂಗಳಗೌರಿ ಸುತ್ತೋಲೆ ಹೊರಡಿಸಿದ್ದಾರೆ.