ಮೈಸೂರು: ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಜಿಲ್ಲೆಯ ಬಣ್ಣಾರಿ ಸಕ್ಕರೆ ಕಾರ್ಖಾನೆಯ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ. ಹಲವು ದಿನದಿಂದ ಸಕ್ಕರೆ ಕಾರ್ಖಾನೆ ಆವರಣದಲ್ಲಿಯೇ ಇದ್ದ ಉತ್ತರ ಭಾರತ ಮೂಲದ ಈ ಕಾರ್ಮಿಕರೀಗ ತಮ್ಮನ್ನು ತವರಿಗೆ ಕಳುಹಿಸಿ ಕೊಡಿ ಎಂದು ನಂಜನಗೂಡು ತಹಶೀಲ್ದಾರ್‌ಗೆ ದುಂಬಾಲು ಬಿದ್ದಿದ್ದಾರೆ.

ತಮಗೆ ಕಳೆದ ಎರಡು ತಿಂಗಳಿಂದ ಸಂಬಳ ನೀಡಿಲ್ಲ. ಹಲವು ದಿನದಿಂದ ಊಟಕ್ಕೂ ಕಷ್ಟಪಡುತ್ತಿದ್ದೇವೆ ಎಂದು ಕಾರ್ಮಿಕರು ನೋವು ವ್ಯಕ್ತಪಡಿಸುತ್ತಿದ್ದಾರೆ. ಉತ್ತರಾಂಚಲ, ಜಾರ್ಖಂಡ್, ಬಿಹಾರದ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

ಚೆಟ್ಟಿನಾಡು ಎಂಬ ಗುತ್ತಿಗೆ ಸಂಸ್ಥೆ ಇವರನ್ನೆಲ್ಲ ಬಿಹಾರ ಮತ್ತು ಉತ್ತರ ಪ್ರದೇಶದಿಂದ ಕರೆ ತಂದಿತ್ತು. ಆದರೆ ಒಂದು ತಿಂಗಳಿಂದ ಚೆಟ್ಟಿನಾಡು ಗುತ್ತಿಗೆ ಸಂಸ್ಥೆಯ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂಬುದಾಗಿ ಕಾರ್ಮಿಕರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಡಕೋಳದಲ್ಲಿ ಸಿಡಿಲು: ಮೂವರು ಸಾವು: ನಾಲ್ವರಿಗೆ ಗಂಭೀರ ಗಾಯ

ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ. ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ ಮಾಲಿಂಗಪ್ಪ(38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ.

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…