ನವದೆಹಲಿ: ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಎಲ್ಲ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಆದೇಶಿಸಿದ್ದಾರೆ. ಅಲ್ಲದೆ ಮರ್ಕಝ್ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲ ತಬ್ಲಿಘಿ ಸದಸ್ಯರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸುವ ಅಗತ್ಯ ಇದ್ದು, ಈ ಸಂಬಂಧ ದೆಹಲಿ ಸರ್ಕಾರ ಇತರೆ ರಾಜ್ಯಗಳೊಂದಿಗೆ ಮಾತುಕತೆ ನಡೆಸುತ್ತಿದ್ದೆ ಎಂದು ಜೈನ್ ತಿಳಿಸಿದ್ದಾರೆ.