ಮಂಗಳೂರು: ಹೂವಿನ ಬೆಳೆಗೆ ಎಕರೆಗೆ ರೈತ ಎಷ್ಟು ಖರ್ಚು ಮಾಡುತ್ತಾನೆ ಎಂಬ ಸಾಮಾನ್ಯ ಜ್ಞಾನವೂ ಸಿದ್ದರಾಮಯ್ಯರಿಗೆ ಇಲ್ಲ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ‌ನಿರ್ವಹಿಸಿದ ಸಿದ್ದರಾಮಯ್ಯ ಈ ರೀತಿಯ ಟೀಕೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಕೊರೋನಾ ವಿಶೇಷ ಪ್ಯಾಕೇಜ್ ಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ಅವರು ಎಕರೆ ಪ್ರದೇಶದಲ್ಲಿ ಹೂವಿನ ಬೆಳೆಗೆ 50 ಲಕ್ಷ ಖರ್ಚು ಮಾಡುತ್ತಾನೆ ಎಂಬ ಹೇಳಿಕೆ ಅವರಲ್ಲಿನ ಜ್ಞಾನದ ಮಟ್ಟವನ್ನು ಸೂಚಿಸುತ್ತದೆ. ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಅಧ್ಯಯನ ಮಾಡಲಿ. ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು ಎಂದು ಸಲಹೆ ನೀಡಿದರು.

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ. ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಕೇವಲ ರಾಜಕಾರಣಕ್ಕಾಗಿ ಈ ಕಾಲಘಟ್ಟವನ್ನು ಉಪಯೋಗಿಸಿದೆ ಹೀಗಾಗಿ ಸಿದ್ದರಾಮಯ್ಯರಂತ ಹಿರಿಯರು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರದ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ಆಯ್ತು ಆಗ ಯಾಕೆ ರೈತರಿಗೆ, ಕೃಷಿಕರಿಗೆ ಯೋಜನೆ ಘೋಷಣೆ ಮಾಡಿಲ್ಲ. ಯಡಿಯೂರಪ್ಪನವರು ಕೊಟ್ಟಿರುವ ಯೋಜನೆ ಅಭೂತಪೂರ್ವವಾದುದು. ಹೀಗಾಗಿ ಬಿಎಸ್ವೈ ಯೋಜನೆಯನ್ನು ಸ್ವಾಗತ ಮಾಡಲು ಮನಸ್ಸು ಇಲ್ಲದ ನೀವು ಕ್ಷುಲ್ಲಕ ರಾಜಕಾರಣ ಮಾಡ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *

You May Also Like

ಉಮೇಶ ಎಂಬ ಟೇಲರ ಹತ್ಯೆ ಖಂಡಿಸಿ ಗಲ್ಲು ಶಿಕ್ಷೆ ವಿಧಿಸಲು ರಾಜ್ಯ ಪಾಲರಿಗೆ ಮನವಿ

ಉತ್ತರಪ್ರಭ ಸದ್ದಿಮುಂಡರಗಿ: ತಾಲೂಕಿನ ದಂಡಾಧಿಕಾರಿಗಳು ವಿವಿಧ ಸಂಘಟನೆಗಳ ಮುಕಾಂತರ ಕನ್ಯಾಯ ಲಾಲ್ ಉಮೇಶ ಎಂಬ ಟೇಲರ್…

Казино Вулкан Рояль в Казахстане КЗ онлайн игровые автоматы на деньги

Онлайн казино Казахстан Online Casino kz Content Как выиграть в Вулканбет? Советы…

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..?

ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,…