ಮಂಗಳೂರು: ಹೂವಿನ ಬೆಳೆಗೆ ಎಕರೆಗೆ ರೈತ ಎಷ್ಟು ಖರ್ಚು ಮಾಡುತ್ತಾನೆ ಎಂಬ ಸಾಮಾನ್ಯ ಜ್ಞಾನವೂ ಸಿದ್ದರಾಮಯ್ಯರಿಗೆ ಇಲ್ಲ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ‌ನಿರ್ವಹಿಸಿದ ಸಿದ್ದರಾಮಯ್ಯ ಈ ರೀತಿಯ ಟೀಕೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಕೊರೋನಾ ವಿಶೇಷ ಪ್ಯಾಕೇಜ್ ಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ಅವರು ಎಕರೆ ಪ್ರದೇಶದಲ್ಲಿ ಹೂವಿನ ಬೆಳೆಗೆ 50 ಲಕ್ಷ ಖರ್ಚು ಮಾಡುತ್ತಾನೆ ಎಂಬ ಹೇಳಿಕೆ ಅವರಲ್ಲಿನ ಜ್ಞಾನದ ಮಟ್ಟವನ್ನು ಸೂಚಿಸುತ್ತದೆ. ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಅಧ್ಯಯನ ಮಾಡಲಿ. ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು ಎಂದು ಸಲಹೆ ನೀಡಿದರು.

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ. ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಕೇವಲ ರಾಜಕಾರಣಕ್ಕಾಗಿ ಈ ಕಾಲಘಟ್ಟವನ್ನು ಉಪಯೋಗಿಸಿದೆ ಹೀಗಾಗಿ ಸಿದ್ದರಾಮಯ್ಯರಂತ ಹಿರಿಯರು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರದ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ಆಯ್ತು ಆಗ ಯಾಕೆ ರೈತರಿಗೆ, ಕೃಷಿಕರಿಗೆ ಯೋಜನೆ ಘೋಷಣೆ ಮಾಡಿಲ್ಲ. ಯಡಿಯೂರಪ್ಪನವರು ಕೊಟ್ಟಿರುವ ಯೋಜನೆ ಅಭೂತಪೂರ್ವವಾದುದು. ಹೀಗಾಗಿ ಬಿಎಸ್ವೈ ಯೋಜನೆಯನ್ನು ಸ್ವಾಗತ ಮಾಡಲು ಮನಸ್ಸು ಇಲ್ಲದ ನೀವು ಕ್ಷುಲ್ಲಕ ರಾಜಕಾರಣ ಮಾಡ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *

You May Also Like

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.

ರಾಯಣ್ಣ ಮೂರ್ತಿಗೆ ಅವಮಾನ: ರಾಯಣ್ಣ ಯುವಶಕ್ತಿ ವೇದಿಕೆ ಖಂಡನೆ

ಬೆಳಗಾವಿ ಜಿಲ್ಲೆ ಪೀರಣವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ಸಂಗೋಳ್ಳಿ ರಾಯಣ್ಣ ಯುವಶಕ್ತಿ ವೇದಿಕೆ ಲಕ್ಷ್ಮೇಶ್ವರ ತಾಲೂಕ ಘಟಕದ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಮಾರ್ಗಸೂಚಿಗಳು ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?

ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗುತ್ತವೆ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಕೆಲವು ವಿನಾಯಿತಿಗಳು ಇವೆ

ಎಟಿಎಂ ಕಳೆದ್ರೆ ಚಿಂತಿಸದಿರಿ, ನೀವು ಮಾಡಬೇಕಾಗಿದ್ದು ಏನು ಗೊತ್ತಾ?

ಅದೆಷ್ಟೋ ಜನ ಎಟಿಎಂ ಕಾರ್ಡ್ಗಳನ್ನು ಕಳೆದುಕೊಂಡು ಪರಿತಪಿಸಿದ್ದುಂಟು. ಮಾನಸಿಕ ನೆಮ್ಮದಿ ಕಳೆದುಕೊಂಡು ಇನ್ನಿಲ್ಲದೇ ಚಿಂತಿಸಿದ್ದುಂಟು. ಆದ್ರೆ ಇದೀಗ ಎಟಿಎಂ ಕಾರ್ಡ್ ಕಳೆದೊಯ್ತು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ನಿಮ್ಮ ಚಿಂತೆಗೊಂದು ಪರಿಹಾರ ಇಲ್ಲಿದೆ.