ಮಂಗಳೂರು: ಹೂವಿನ ಬೆಳೆಗೆ ಎಕರೆಗೆ ರೈತ ಎಷ್ಟು ಖರ್ಚು ಮಾಡುತ್ತಾನೆ ಎಂಬ ಸಾಮಾನ್ಯ ಜ್ಞಾನವೂ ಸಿದ್ದರಾಮಯ್ಯರಿಗೆ ಇಲ್ಲ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ‌ನಿರ್ವಹಿಸಿದ ಸಿದ್ದರಾಮಯ್ಯ ಈ ರೀತಿಯ ಟೀಕೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಕೊರೋನಾ ವಿಶೇಷ ಪ್ಯಾಕೇಜ್ ಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ಅವರು ಎಕರೆ ಪ್ರದೇಶದಲ್ಲಿ ಹೂವಿನ ಬೆಳೆಗೆ 50 ಲಕ್ಷ ಖರ್ಚು ಮಾಡುತ್ತಾನೆ ಎಂಬ ಹೇಳಿಕೆ ಅವರಲ್ಲಿನ ಜ್ಞಾನದ ಮಟ್ಟವನ್ನು ಸೂಚಿಸುತ್ತದೆ. ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಅಧ್ಯಯನ ಮಾಡಲಿ. ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು ಎಂದು ಸಲಹೆ ನೀಡಿದರು.

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ. ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಕೇವಲ ರಾಜಕಾರಣಕ್ಕಾಗಿ ಈ ಕಾಲಘಟ್ಟವನ್ನು ಉಪಯೋಗಿಸಿದೆ ಹೀಗಾಗಿ ಸಿದ್ದರಾಮಯ್ಯರಂತ ಹಿರಿಯರು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರದ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ಆಯ್ತು ಆಗ ಯಾಕೆ ರೈತರಿಗೆ, ಕೃಷಿಕರಿಗೆ ಯೋಜನೆ ಘೋಷಣೆ ಮಾಡಿಲ್ಲ. ಯಡಿಯೂರಪ್ಪನವರು ಕೊಟ್ಟಿರುವ ಯೋಜನೆ ಅಭೂತಪೂರ್ವವಾದುದು. ಹೀಗಾಗಿ ಬಿಎಸ್ವೈ ಯೋಜನೆಯನ್ನು ಸ್ವಾಗತ ಮಾಡಲು ಮನಸ್ಸು ಇಲ್ಲದ ನೀವು ಕ್ಷುಲ್ಲಕ ರಾಜಕಾರಣ ಮಾಡ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *

You May Also Like

ಸರ್ಕಾರದ ಅಸಡ್ಡೆ – ಯಾದಗಿರಿಯಲ್ಲಿ ಹೆಚ್ಚಿದ ಆತಂಕ!

ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ…

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

ಹೊರಗಿನಿಂದ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ!

ಲಾಕ್ ಡೌನ್ ವಿನಾಯಿತಿ ಬೆನ್ನಲ್ಲಿಯೇ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಆಗಮಿಸುವ ಎಲ್ಲರನ್ನೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವುದಾಗಿ ಆದೇಶಿಸಿದೆ.

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…