ಶಿವಮೊಗ್ಗ: ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ನರೇಗಾ ಕಾಮಗಾರಿ ಮುಖಾಂತರ ಅಂತರ್ಜಲ ಚೇತನ ಕಾರ್ಯಕ್ರಮಗಳನ್ನು ಶುರುಮಾಡಲಾಗಿದೆ. ನೀರು ಭೂಮಿಯಲ್ಲಿ ಇಂಗುವ ಪ್ರಮಾಣ ಕಡಿಮೆ ಇದ್ದು ಜಾಸ್ತಿ ಮಾಡುವ ಯೋಚನೆಯಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಬೇರೆ ಬೇರೆ ಊರಿಗೆ ಹೋದಂತಹ ಗ್ರಾಮಸ್ಥರು ಹಳ್ಳಿಗೆ ಬಂದಂತಹ ಸಂದರ್ಭದಲ್ಲಿ ಇಂದು ಅಂಥವರಿಗೆ ಕೆಲಸದ ಅನಿವಾರ್ಈಯತೆ ಇದೆ. ಇಡೀ ರಾಜ್ಯದಲ್ಲಿ ಈ ಯೋಜನೆಯ ಮೂಲಕ ಅಭಿವೃದ್ಧಿ ಮಾಡಲು ಹೊರಟಿದ್ದೇವೆ ಎಂದರು.