ವಿಶಾಖಪಟ್ಟಣ: ಇಲ್ಲಿನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಬ್ಬರು ವೃದ್ಧರು, 7 ವರ್ಷದ ಬಾಲಕಿ ಸೇರಿದಂತೆ ಒಟ್ಟು 10  ಮಂದಿ ಈ ವರೆಗೂ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. 170ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ  ಹರಡಿದೆ. ಪರಿಣಾಮ ಆ ಪ್ರದೇಶದ ಸುತ್ತಲಿನ ಜನರು ವಿಷಾನೀಲವನ್ನು ಉಸಿರಾಡಿದ ಕೂಡಲೇ ಅಸ್ವಸ್ಥರಾಗಿದ್ದಾರೆ. ವಿಷಾನಿಲ ಸೋರಿಕೆಯಿಂದಾಗಿ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಗೋಪಾಲಪಟ್ಟಣಂ ಸುತ್ತಲಿನ ಐದು ಗ್ರಾಮಗಳಲ್ಲಿನ ಜನರಿಗೆ ಉಸಿರಾಟದ ತೊಂದರೆ ಮತ್ತು ಗಂಟಲು ಕೆರೆತ ಸಮಸ್ಯೆ ಆರಂಭವಾಗಿದೆ. ನೂರಾರು ಮಂದಿ ಉಸಿರಾಟದ ಸಮಸ್ಯೆ, ಗಂಟಲು ನೋವು, ಕಣ್ಣಿನ ಉರಿ, ಹೊಟ್ಟೆ ನೋವು, ಇತರೆ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ  ದಾಖಲಾಗುತ್ತಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಲು ಇದೀಗ ಆ್ಯಂಬುಲೆನ್ಸ್ ಗಳನ್ನು ಮತ್ತು ಸರ್ಕಾರಿ ಸಾರಿಗೆ ಬಸ್ ಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು: ವಿಪಕ್ಷಗಳ ವಿರೋಧ

ಯಲಹಂಕ ಮೇಲ್ಸೇತುವೆಗೆ ವಿನಾಯಕ ದಾಮೋದರ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಆದರೆ, ಇದು ವಿಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಬಿಹಾರ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಆರ್ ಜೆಡಿ!

ಪಾಟ್ನಾ : ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.

ರಾಜ್ಯದಲ್ಲಿಂದು 12 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ.