ಮೈಸೂರು: ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ. ಕೆ.ಆರ್. ನಗರ ತಾಲೂಕು ಕಾಳಮ್ಮನ ಕೊಪ್ಪಲು ಗ್ರಾಮಕ್ಕೆ ಪಶು ವೈದ್ಯರನ್ನು ಕಳುಹಿಸಿಕೊಟ್ಟು, ಬಸವನ ಚಿಕಿತ್ಸೆಗೆ ನೆರವಾಗಿದ್ದಾರೆ.

ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಬ್ಯರ್ಥಿ ಸುಮಲತಾ ಅಂಬರೀಶ್ ಅವರ ಪ್ರಚಾರ ವೇಳೆ ಕಾಳಮ್ಮನಕೊಪ್ಪಲು ಗ್ರಾಮದಲ್ಲಿ ರೋಡ್ ಶೋ ಏರ್ಪಡಿಸಲಾಗಿತ್ತು. ಈ ವೇಳೆ ಬಸವವೊಂದು ರೋಡ್ ಶೋಗೆ ಅಡ್ಡಲಾಗಿ ನಿಂತಿತ್ತು. ಈ ಮೂಲಕ ಪ್ರಚಾರಕ್ಕೆ ಅಡ್ಡಿಯಾಯಿತು. ಇದನ್ನು ಗಮನಿಸಿದ ನಟ ದರ್ಶನ್ ಖುದ್ದು ರೋಡ್ ಶೋ ವಾಹನದಿಂದ ಕೆಳಗಿಳಿದು ಬಂದು ಬಸವನ ಮೈಸವರಿದರು. ಇದಾದ ಕೆಲ ಕ್ಷಣದಲ್ಲಿ ಬಸವ ಸ್ಥಳಾವಕಾಶ ಮಾಡಿಕೊಟ್ಟು ರೋಡ್ ಶೋಗೆ ಅನುಮಾಡಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ದರ್ಶನ್ ಅವರ ಪ್ರಾಣಿ ಪ್ರೀತಿ ಜನರ ಮೆಚ್ಚುಗೆಗೂ ಪಾತ್ರವಾಗಿತ್ತು.

ಇದೇ ಬಸವ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿತ್ತು. ಈ ವಿಷಯನ್ನು ಗ್ರಾಮಸ್ಥರು ನಟ ದರ್ಶನ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಪಂದಿಸಿದ ದರ್ಶನ್ ತಮ್ಮ ಸ್ನೇಹಿತರೊಂದಿಗೆ ಪಶು ವೈದ್ಯರನ್ನು ಔಷಧಿ ಸಮೇತವಾಗಿ ಕಾಳಮ್ಮನಕೊಪ್ಪಲು ಗ್ರಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ದರ್ಶನ್ ಅವರ ಈ ಕಾರ್ಯ ಗ್ರಾಮಸ್ಥರ ಮೆಚ್ಚುಗೆ ಪಡೆದಿದೆ.

Leave a Reply

Your email address will not be published. Required fields are marked *

You May Also Like

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ನಗರ ಸಭೆ ಚುನಾವಣೆ: 30ನೇ ವಾರ್ಡ ಕಾಂಗ್ರೇಸ್ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 30ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 30ನೇ  ವಾರ್ಡನಲ್ಲಿ ಕಾಂಗ್ರೇಸಗೆ…

ಸ್ಕೂಟಿ ಮತ್ತು ಬಿಆರ್ ಟಿಎಸ್ ನಡುವೆ ಡಿಕ್ಕಿ : ಸ್ಕೂಟಿ ಸವಾರನ ಸ್ಥಿತಿ ಗಂಭೀರ

ಬಿಆರ್ ಟಿಎಸ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನ ಸ್ಥಿತಿ ಗಂಭೀರವಾದ ಘಟನೆ ನಗರದ ನವನಗರ ಆರ್ ಟಿಓ ಹತ್ತಿರ ನಡೆದಿದೆ.