ಮೈಸೂರು: ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ. ಕೆ.ಆರ್. ನಗರ ತಾಲೂಕು ಕಾಳಮ್ಮನ ಕೊಪ್ಪಲು ಗ್ರಾಮಕ್ಕೆ ಪಶು ವೈದ್ಯರನ್ನು ಕಳುಹಿಸಿಕೊಟ್ಟು, ಬಸವನ ಚಿಕಿತ್ಸೆಗೆ ನೆರವಾಗಿದ್ದಾರೆ.

ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಬ್ಯರ್ಥಿ ಸುಮಲತಾ ಅಂಬರೀಶ್ ಅವರ ಪ್ರಚಾರ ವೇಳೆ ಕಾಳಮ್ಮನಕೊಪ್ಪಲು ಗ್ರಾಮದಲ್ಲಿ ರೋಡ್ ಶೋ ಏರ್ಪಡಿಸಲಾಗಿತ್ತು. ಈ ವೇಳೆ ಬಸವವೊಂದು ರೋಡ್ ಶೋಗೆ ಅಡ್ಡಲಾಗಿ ನಿಂತಿತ್ತು. ಈ ಮೂಲಕ ಪ್ರಚಾರಕ್ಕೆ ಅಡ್ಡಿಯಾಯಿತು. ಇದನ್ನು ಗಮನಿಸಿದ ನಟ ದರ್ಶನ್ ಖುದ್ದು ರೋಡ್ ಶೋ ವಾಹನದಿಂದ ಕೆಳಗಿಳಿದು ಬಂದು ಬಸವನ ಮೈಸವರಿದರು. ಇದಾದ ಕೆಲ ಕ್ಷಣದಲ್ಲಿ ಬಸವ ಸ್ಥಳಾವಕಾಶ ಮಾಡಿಕೊಟ್ಟು ರೋಡ್ ಶೋಗೆ ಅನುಮಾಡಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ದರ್ಶನ್ ಅವರ ಪ್ರಾಣಿ ಪ್ರೀತಿ ಜನರ ಮೆಚ್ಚುಗೆಗೂ ಪಾತ್ರವಾಗಿತ್ತು.

ಇದೇ ಬಸವ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿತ್ತು. ಈ ವಿಷಯನ್ನು ಗ್ರಾಮಸ್ಥರು ನಟ ದರ್ಶನ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಪಂದಿಸಿದ ದರ್ಶನ್ ತಮ್ಮ ಸ್ನೇಹಿತರೊಂದಿಗೆ ಪಶು ವೈದ್ಯರನ್ನು ಔಷಧಿ ಸಮೇತವಾಗಿ ಕಾಳಮ್ಮನಕೊಪ್ಪಲು ಗ್ರಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ದರ್ಶನ್ ಅವರ ಈ ಕಾರ್ಯ ಗ್ರಾಮಸ್ಥರ ಮೆಚ್ಚುಗೆ ಪಡೆದಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.

ಸುರೇಶ್ ಕುಟುಂಬಕ್ಕೆ ಪರಿಹಾರ, ಪ್ರಕರಣ ಸಿಬಿಐ ತನಿಖೆಗೆ ಒತ್ತಾಯ

ಕಲಬುರಗಿಯಲ್ಲಿ ನಡದ ಘಟನೆಯಲ್ಲಿ ಗೋಂಧಳಿ ಸಮಾಜದ ಸುರೇಶ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಸರ್ಕಾರ ತನ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೋಂಧಳಿ ಸಮಾಜದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದರು.

ಈಶಾನ್ಯ ದೆಹಲಿ ಹೊರತು ಪಡಿಸಿ ದೇಶದಲ್ಲಿ 10ನೇ ತರಗತಿ ಸಿಬಿಎಸ್ಇ ಪರೀಕ್ಷೆಗೆ ತಾತ್ಕಾಲಿಕ ತಡೆ

ಹತ್ತನೇ ತರಗತಿ ಸಿಬಿಎಸ್ಇ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.