ವಿಶಾಖಪಟ್ಟಣ ಘಟನೆ: ಮೃತ ಕುಟುಂಬಕ್ಕೆ ಕೋಟಿ ರೂ, ಪರಿಹಾರ ಘೋಷಣೆ

ವಿಶಾಖಪಟ್ಟಣಂ: ಇಲ್ಲಿನ ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅಸ್ವಸ್ಥರ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ಬರಿಸಲಿದೆ. ತೀವ್ರ ಅಸ್ವಸ್ಥರಿಗೆ 10 ಲಕ್ಷ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ನೆರುವು ನೀಡಲು ಆಂದ್ರ ಸರ್ಕಾರ ತೀರ್ಮಾನಿಸಿದೆ. ಜೊತೆಗೆ ಗಾಯಾಳುಗಳಿಗೆ 1 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಆಂದ್ರ ಪ್ರದೇಶ ಸಿಎಂ ಜಗನಮೋಹನರೆಡ್ಡಿ ತಿಳಿಸಿದ್ದಾರೆ.

ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ದುರ್ಘಟನೆಯಿಂದ ಈಗಾಗಲೇ 1000ಕ್ಕೂ ಹೆಚ್ಚು ಜನರು ವಿಷಾನಿಲವನ್ನು ಸೇವಿಸಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ 200ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಸುತ್ತಲಿನ ಕೆಲ ಗ್ರಾಮಸ್ಥರಿಗೆ ಕಣ್ಣಿನ ಉರಿ, ಹೊಟ್ಟೆ ನೋವು, ಉಸಿರಾಟದ ಸಮಸ್ಯೆ, ಗಂಟಲು ನೋವು ಕಾಣಿಸಿಕೊಂಡಿದೆ.

Exit mobile version