ವಿಶಾಖಪಟ್ಟಣಂ: ಇಲ್ಲಿನ ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅಸ್ವಸ್ಥರ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ಬರಿಸಲಿದೆ. ತೀವ್ರ ಅಸ್ವಸ್ಥರಿಗೆ 10 ಲಕ್ಷ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ನೆರುವು ನೀಡಲು ಆಂದ್ರ ಸರ್ಕಾರ ತೀರ್ಮಾನಿಸಿದೆ. ಜೊತೆಗೆ ಗಾಯಾಳುಗಳಿಗೆ 1 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಆಂದ್ರ ಪ್ರದೇಶ ಸಿಎಂ ಜಗನಮೋಹನರೆಡ್ಡಿ ತಿಳಿಸಿದ್ದಾರೆ.

ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ದುರ್ಘಟನೆಯಿಂದ ಈಗಾಗಲೇ 1000ಕ್ಕೂ ಹೆಚ್ಚು ಜನರು ವಿಷಾನಿಲವನ್ನು ಸೇವಿಸಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ 200ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಸುತ್ತಲಿನ ಕೆಲ ಗ್ರಾಮಸ್ಥರಿಗೆ ಕಣ್ಣಿನ ಉರಿ, ಹೊಟ್ಟೆ ನೋವು, ಉಸಿರಾಟದ ಸಮಸ್ಯೆ, ಗಂಟಲು ನೋವು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

2 ಅಪರೂಪದ ಆಮೆ ಪತ್ತೆ: ಒಂದು ಹಳದಿ ಬಣ್ಣದ್ದು, ಇನ್ನೊಂದು ಮೃದು ಚಿಪ್ಪಿನದ್ದು!

ಕಪ್ಪು, ದಟ್ಟ ಕಂದು ಬಣ್ಣದ ಆಮೆಗಳನ್ನು ನೋಡಿದ್ದೇವೆ. ಆದರೆ ಒರಿಸ್ಸಾದಲ್ಲೊಂದು ಅಪರೂಪದ ಆಮೆ ಸಿಕ್ಕಿದೆ. ಅದರ ಬಣ್ಣ ಹಳದಿ. ಇಡೀ ದೇಹ, ಚಿಪ್ಪು ಎಲ್ಲವೂ ಸಂಪೂರ್ಣ ಹಳದಿ.

ಕೊರೋನಾ ಜಾಗೃತಿ: ಹಣ್ಣು, ತರಕಾರಿ ತೊಳೆಯುವಾಗ ಎಚ್ಚರ!

ಕೊರೋನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ವೈರಸ್ ನಿರ್ಮೂಲನೆಗೆ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ. ದಿನಕ್ಕೆ ಐದಾರು ಸಲ…

ಲಾಕ್ ಡೌನ್ ಬಗ್ಗೆ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ…

ಕೊರೊನಾ ಭಯ – ಹಲವೆಡೆ ಸ್ವಯಂ ಪ್ರೇರಿತ ಬಂದ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ…