ವಿಶಾಖಪಟ್ಟಣಂ: ಇಲ್ಲಿನ ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅಸ್ವಸ್ಥರ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ಬರಿಸಲಿದೆ. ತೀವ್ರ ಅಸ್ವಸ್ಥರಿಗೆ 10 ಲಕ್ಷ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ನೆರುವು ನೀಡಲು ಆಂದ್ರ ಸರ್ಕಾರ ತೀರ್ಮಾನಿಸಿದೆ. ಜೊತೆಗೆ ಗಾಯಾಳುಗಳಿಗೆ 1 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಆಂದ್ರ ಪ್ರದೇಶ ಸಿಎಂ ಜಗನಮೋಹನರೆಡ್ಡಿ ತಿಳಿಸಿದ್ದಾರೆ.

ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ದುರ್ಘಟನೆಯಿಂದ ಈಗಾಗಲೇ 1000ಕ್ಕೂ ಹೆಚ್ಚು ಜನರು ವಿಷಾನಿಲವನ್ನು ಸೇವಿಸಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ 200ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಸುತ್ತಲಿನ ಕೆಲ ಗ್ರಾಮಸ್ಥರಿಗೆ ಕಣ್ಣಿನ ಉರಿ, ಹೊಟ್ಟೆ ನೋವು, ಉಸಿರಾಟದ ಸಮಸ್ಯೆ, ಗಂಟಲು ನೋವು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!! ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು…

ರಾಜ್ಯದಲ್ಲಿಂದು 299 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ.

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…