ಹಾವೇರಿ: ಕಳೆದ ಒಂದುವರೆ ತಿಂಗಳಿಗೂ ಅಧಿಕ ದಿನಗಳಿಂದ ಲಾಕ್ ಡೌನ್ ಮುಂದುವರೆದಿದ್ದು, ಇದರ ಪರಿಣಾಮ ಬಹುತೇಕ ವಲಯಕ್ಕೆ ಬೀರಿದೆ. ಅದರಲ್ಲೂ ರೈತರನ್ನಂತೂ ಕೊರೋನಾ ಕಂಗಾಲಾಗಿಸಿದೆ. ಒಂದೆಡೆ ಸೂಕ್ತ ಬೆಲೆ ಸಿಗದೇ ಪರದಾಟ, ಜೊತೆಗೆ ಕೆಲವು ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದಂತಾಗಿರುವುದು. ಇದರಿಂದಾಗಿ ರೈತ ವಲಯ ದಿಕ್ಕು ತೋಚದಂತಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲೊಬ್ಬ ರೈತ ತಾನು ಬೆಳೆದ ಫಸಲನ್ನು ನಾಶ ಪಡಿಸಿದ ಘಟನೆ ನಡೆದಿದೆ.

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ. ಹಾವೇರಿ ತಾಲೂಕಿನ ಹಿರೆಲಿಂಗದಹಳ್ಳಿಯ ಗ್ರಾಮದ ರೈತ ಪಕ್ಕಿರಪ್ಪ ಮುದಿಗೌಡರ ಮೆಣಸಿನಕಾಯಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಬೆಳೆ ನಾಶ ಮಾಡಿ ಅಸಹಾಯಕನಾಗಿದ್ದಾನೆ.

ಹಾವೇರಿ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಬ್ಯಾಡಗಿ ಮೆಣಸಿನಕಾಯಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಲಾಗುತ್ತದೆ. ಆದರೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಕೂಡ ಕೊರೋನಾ ಎಫೆಕ್ಟ್ ನಿಂದ ಬಂದ್ ಆಗಿರುವುದು, ಹಾಗೂ ಸೂಕ್ತ ಧಾರಣೆ ಇಲ್ಲದೇ ಇರುವುದು ರೈತನ ಈ ಸ್ಥಿತಿಗೆ ಕಾರಣ.

Leave a Reply

Your email address will not be published. Required fields are marked *

You May Also Like

ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಗದಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆ ವಿವರ

ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿನ ಒಟ್ಟು 6004 ಗ್ರಾಮ ಪಂಚಾಯತಿಗಳಲ್ಲಿ ಅವಧಿ ಮುಕ್ತಾಯವಾಗದ 162 ಗ್ರಾಮ ಪಂಚಾಯತಿಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ 6 ಗ್ರಾಮ ಪಂಚಾಯತಿಗಳು ಮತ್ತು 33 ಗ್ರಾಮ ಪಂಚಾಯತಿಗಳು ಪೂರ್ಣವಾಗಿ ಹಾಗೂ 41 ಗ್ರಾಮ ಪಂಚಾಯತಿಗಳು ಬಹುಶಃ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವುದರಿಂದ ಒಟ್ಟು 74 ಗ್ರಾಮ ಪಂಚಾಯತಿಗಳು ಒಟ್ಟಾರೆ 242 ಗ್ರಾಮ ಪಂಚಾಯತಿಗಳನ್ನು ಹೊರತು ಪಡೆಸಿ ಉಳಿದ ಎಲ್ಲ 5762 ಗ್ರಾಮ ಪಂಚಾಯತಿಗಳ 35,884 ಕ್ಷೇತ್ರಗಳಿಂದ ಒಟ್ಟು 92121 ಸ್ಥಾನಗಳಿಗೆ ಈ ಕೆಳಕಂಡ ವೇಳಾ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು

ಪಿಎಸಿ ತನಿಖೆಗೆ ತಡೆ ನೀಡಿದ ಕಾಗೇರಿ: ರವಿಕೃಷ್ಣಾ ರೆಡ್ಡಿ ವಿರೋಧ

ಬೆಂಗಳೂರು: ವೈದ್ಯಕೀಯ ಸಾಮಗ್ರಿಗಳ ಖರೀದಿ ಅಕ್ರಮ ದೂರು ಕುರಿತು ತನಿಖೆಗೆ ತಡೆ ನೀಡಿದ ಸ್ಪೀಕರ್ ವಿಶ್ವೇಶ್ವರ…