ಹಾವೇರಿ: ಕಳೆದ ಒಂದುವರೆ ತಿಂಗಳಿಗೂ ಅಧಿಕ ದಿನಗಳಿಂದ ಲಾಕ್ ಡೌನ್ ಮುಂದುವರೆದಿದ್ದು, ಇದರ ಪರಿಣಾಮ ಬಹುತೇಕ ವಲಯಕ್ಕೆ ಬೀರಿದೆ. ಅದರಲ್ಲೂ ರೈತರನ್ನಂತೂ ಕೊರೋನಾ ಕಂಗಾಲಾಗಿಸಿದೆ. ಒಂದೆಡೆ ಸೂಕ್ತ ಬೆಲೆ ಸಿಗದೇ ಪರದಾಟ, ಜೊತೆಗೆ ಕೆಲವು ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದಂತಾಗಿರುವುದು. ಇದರಿಂದಾಗಿ ರೈತ ವಲಯ ದಿಕ್ಕು ತೋಚದಂತಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲೊಬ್ಬ ರೈತ ತಾನು ಬೆಳೆದ ಫಸಲನ್ನು ನಾಶ ಪಡಿಸಿದ ಘಟನೆ ನಡೆದಿದೆ.

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ. ಹಾವೇರಿ ತಾಲೂಕಿನ ಹಿರೆಲಿಂಗದಹಳ್ಳಿಯ ಗ್ರಾಮದ ರೈತ ಪಕ್ಕಿರಪ್ಪ ಮುದಿಗೌಡರ ಮೆಣಸಿನಕಾಯಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಬೆಳೆ ನಾಶ ಮಾಡಿ ಅಸಹಾಯಕನಾಗಿದ್ದಾನೆ.

ಹಾವೇರಿ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಬ್ಯಾಡಗಿ ಮೆಣಸಿನಕಾಯಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಲಾಗುತ್ತದೆ. ಆದರೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಕೂಡ ಕೊರೋನಾ ಎಫೆಕ್ಟ್ ನಿಂದ ಬಂದ್ ಆಗಿರುವುದು, ಹಾಗೂ ಸೂಕ್ತ ಧಾರಣೆ ಇಲ್ಲದೇ ಇರುವುದು ರೈತನ ಈ ಸ್ಥಿತಿಗೆ ಕಾರಣ.

Leave a Reply

Your email address will not be published. Required fields are marked *

You May Also Like

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.