ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು ಹಳಿ ಮೇಲೆ ಮಲಗಿರುವ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಎಲ್ಲರೂ ರೈಲು ಟ್ರಾಕ್ ಮೇಲೆ ರಾತ್ರಿ ಮಲಗಿದ್ದರು. ಈ ವೇಳೆ ರೈಲು ಹರಿದ ಪರಿಣಾಮ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ‌.
ಇನ್ನೂ ನಾಲ್ವರಿಗೆ ಗಂಭೀರ ಗಾಯವಾಗಿದೆ. ಔರಂಗಾಬಾದ್ – ಜಾಲನಾ ಮಧ್ಯ ಘಟನೆ ಸಂಭವಿಸಿದೆ.
ಎಲ್ಲರೂ ಜಾಲನಾ ಎಮ್ ಆಯ್.ಡಿ.ಸಿ ಕಾರ್ಮಿಕರು ಎಂಬ ಮಾಹಿತಿ ಲಭ್ಯ ವಾಗಿದೆ.
ಎಲ್ಲಾ ಕಾರ್ಮಿಕರು ಮಧ್ಯಪ್ರದೇಶ ರಾಜ್ಯದ ನಿವಾಸಿಗಳಾಗಿದ್ದಾರೆ.
ಗಾಯಾಳುಗಳಿಗೆ ಔರಂಗಾಬಾದ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೈಲು ಸಂಚಾರ ಬಂದ್ ಇದೇ ಎಂದು ಭಾವಿಸಿ ರೈಲು ಟ್ರ್ಯಾಕ್ ಮೆಲೆ ಮಲಗಿದ್ದರು. ಬೆಳಿಗ್ಗೆ 6:30 ರ ಸಮಯಕ್ಕೆ ಘಟನೆ ಸಂಬಂಧಿಸಿದೆ.
ರೈಲು ಟ್ರಾಕ್ ಮೇಲಿಂದ ಕಾರ್ಮಿಕರು ನಡೆದುಕೊಂಡು ಬರುತ್ತಿದ್ದಾಗ ಹಳಿಯ ಮೇಲೆ ಮಲಗಿದ್ದರು ಎನ್ನಲಾಗಿದ್ದು ಸ್ಥಳಕ್ಕೆ ರೈಲ್ವೆ ಪೋಲಿಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.