ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು ಹಳಿ ಮೇಲೆ ಮಲಗಿರುವ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಎಲ್ಲರೂ ರೈಲು ಟ್ರಾಕ್ ಮೇಲೆ ರಾತ್ರಿ ಮಲಗಿದ್ದರು. ಈ ವೇಳೆ ರೈಲು ಹರಿದ ಪರಿಣಾಮ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ‌.
ಇನ್ನೂ ನಾಲ್ವರಿಗೆ ಗಂಭೀರ ಗಾಯವಾಗಿದೆ. ಔರಂಗಾಬಾದ್ – ಜಾಲನಾ ಮಧ್ಯ ಘಟನೆ ಸಂಭವಿಸಿದೆ.
ಎಲ್ಲರೂ ಜಾಲನಾ ಎಮ್ ಆಯ್.ಡಿ.ಸಿ ಕಾರ್ಮಿಕರು ಎಂಬ ಮಾಹಿತಿ ಲಭ್ಯ ವಾಗಿದೆ.
ಎಲ್ಲಾ ಕಾರ್ಮಿಕರು ಮಧ್ಯಪ್ರದೇಶ ರಾಜ್ಯದ ನಿವಾಸಿಗಳಾಗಿದ್ದಾರೆ.
ಗಾಯಾಳುಗಳಿಗೆ ಔರಂಗಾಬಾದ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೈಲು ಸಂಚಾರ ಬಂದ್ ಇದೇ ಎಂದು ಭಾವಿಸಿ ರೈಲು ಟ್ರ್ಯಾಕ್ ಮೆಲೆ ಮಲಗಿದ್ದರು. ಬೆಳಿಗ್ಗೆ 6:30 ರ ಸಮಯಕ್ಕೆ ಘಟನೆ ಸಂಬಂಧಿಸಿದೆ.
ರೈಲು ಟ್ರಾಕ್ ಮೇಲಿಂದ ಕಾರ್ಮಿಕರು ನಡೆದುಕೊಂಡು ಬರುತ್ತಿದ್ದಾಗ ಹಳಿಯ ಮೇಲೆ ಮಲಗಿದ್ದರು ಎನ್ನಲಾಗಿದ್ದು ಸ್ಥಳಕ್ಕೆ ರೈಲ್ವೆ ಪೋಲಿಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮತದಾನಕ್ಕೆ ಆಂಬುಲೆನ್ಸ್ ನಲ್ಲಿ ಬಂದ ಬಿಜೆಪಿ ಶಾಸಕ

ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ…

15 ತಿಂಗಳ ಮಗುವನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿರುವ ತಾಯಿ!

ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.

ಮದುವೆಯಾಗುವುದಾಗಿ 46 ವರ್ಷದ ಮಹಿಳೆಗೆ ವಂಚನೆ!

ಮದುವೆಯಾಗುವುದಾಗಿ ನಂಬಿಸಿ 46 ವರ್ಷದ ಮಹಿಳೆಗೆ ರೂ.5.6 ಲಕ್ಷ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.