ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು ಹಳಿ ಮೇಲೆ ಮಲಗಿರುವ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಎಲ್ಲರೂ ರೈಲು ಟ್ರಾಕ್ ಮೇಲೆ ರಾತ್ರಿ ಮಲಗಿದ್ದರು. ಈ ವೇಳೆ ರೈಲು ಹರಿದ ಪರಿಣಾಮ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ‌.
ಇನ್ನೂ ನಾಲ್ವರಿಗೆ ಗಂಭೀರ ಗಾಯವಾಗಿದೆ. ಔರಂಗಾಬಾದ್ – ಜಾಲನಾ ಮಧ್ಯ ಘಟನೆ ಸಂಭವಿಸಿದೆ.
ಎಲ್ಲರೂ ಜಾಲನಾ ಎಮ್ ಆಯ್.ಡಿ.ಸಿ ಕಾರ್ಮಿಕರು ಎಂಬ ಮಾಹಿತಿ ಲಭ್ಯ ವಾಗಿದೆ.
ಎಲ್ಲಾ ಕಾರ್ಮಿಕರು ಮಧ್ಯಪ್ರದೇಶ ರಾಜ್ಯದ ನಿವಾಸಿಗಳಾಗಿದ್ದಾರೆ.
ಗಾಯಾಳುಗಳಿಗೆ ಔರಂಗಾಬಾದ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೈಲು ಸಂಚಾರ ಬಂದ್ ಇದೇ ಎಂದು ಭಾವಿಸಿ ರೈಲು ಟ್ರ್ಯಾಕ್ ಮೆಲೆ ಮಲಗಿದ್ದರು. ಬೆಳಿಗ್ಗೆ 6:30 ರ ಸಮಯಕ್ಕೆ ಘಟನೆ ಸಂಬಂಧಿಸಿದೆ.
ರೈಲು ಟ್ರಾಕ್ ಮೇಲಿಂದ ಕಾರ್ಮಿಕರು ನಡೆದುಕೊಂಡು ಬರುತ್ತಿದ್ದಾಗ ಹಳಿಯ ಮೇಲೆ ಮಲಗಿದ್ದರು ಎನ್ನಲಾಗಿದ್ದು ಸ್ಥಳಕ್ಕೆ ರೈಲ್ವೆ ಪೋಲಿಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹ್ಯಾಂಡ್ ಸಾನಿಟೈಸರ್ ಸ್ಪೋಟವಾಗುವುದು ನಿಜನಾ..?

ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಸ್ವಯಂಪ್ರೇರಿತ ದಹನಕ್ಕೆ ಸಮರ್ಥವಾಗಿರುವುದಿಲ್ಲ ಎಂದು ತಿಳಿದುಬಂದಿದೆ.

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ನೂತನವಾಗಿ 11 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಕಂಡಿದೆ. ಈ ಪೈಕಿ 22 ಜನ ಸಾವನ್ನಪ್ಪಿದ್ದಾರೆ.