ಬೆಂಗಳೂರು: ರಾಜ್ಯದಲ್ಲಿ ಕೇವಲ 13 ಜನರಿಂದ 498 ಜನರಿಗೆ ಕೊರೊನಾ ವೈರಸ್ ಹರಡಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇಂದು ಒಂದೇ ದಿನ ಬರೋಬ್ಬರಿ 45 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಯಂತೆ ಮೇ. 7ರ ವರೆಗೆ ನಂಜನಗೂಡು ಔಷಧಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೋಂಕಿತ ವ್ಯಕ್ತಿಯೊಬ್ಬನಿಂದಲೇ ಸುಮಾರು 76 ಜನರಿಗೆ ವೈರಸ್ ಹರಡಿದೆ ಎಂದು ತಿಳಿದು ಬಂದಿದೆ.

ವಿಜಯಪುರದ 60 ವರ್ಷದ ಮಹಿಳೆಯಿಂದ 37 ಜನರಿಗೆ ಸೋಂಕು ಹರಡಿದೆ. ಬೆಳಗಾವಿ ಮೂಲದ 20 ವರ್ಷದ ಯುವಕನಿಂದ 36 ಜನರಿಗೆ ಸೋಂಕು ಹರಡಿದೆ. ಒಬ್ಬ ಸೋಂಕಿತ ವ್ಯಕ್ತಿಯಿಂದ ನೇರ ಹಾಗೂ ಪರೋಕ್ಷವಾಗಿ 48 ಮಂದಿಗಾದರೂ ಸೋಂಕು ತಗುಲಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೊರೊನಾ ವಾರ್ ರೂಂ ಮತ್ತು ಸೋಂಕು ಪತ್ತೆ ತಂಡದ ಉಸ್ತವಾರಿ ವಹಿಸಿರುವ ಐಎಎಸ್ ಅಧಿಕಾರಿ ಮುನೀಶ್ ಮುದ್ಗಿಲ್ ಅವರು, ತಾವು ಇತರರಿಗೂ ವೈರಸ್ ಹರಡುತ್ತಿದ್ದೇವೆಂಬ ವಿಚಾರ ಸೋಂಕಿತ ವ್ಯಕ್ತಿಗಳಿಗೆ ತಿಳಿದಿರುವುದಿಲ್ಲ ಎಂದಿದ್ದಾರೆ.

23 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಆದರೆ, ಆತನಲ್ಲಿ ವೈರಸ್ ಕುರಿತ ಯಾವುದೇ ಲಕ್ಷಣಗಳೂ ಪತ್ತೆಯಾಗಿರಲಿಲ್ಲ. ಇದರಿಂದಾಗಿ ಆತನಿಗೆ ತಿಳಿಯದಂತೆಯೇ 20 ಜನರಿಗೆ ಸೋಂಕು ಹರಡಿದೆ. ಇನ್ನುಳಿದಂತೆ ಹಲವರು ವ್ಯಕ್ತಿಗಳಿಂದ ವ್ಯಾಪಕವಾಗಿ ವೈರಸ್ ಹರಡಿದೆ. ಕೇವಲ 13 ಜನರಿಂದ 498 ಜನರಲ್ಲಿ ವೈರಸ್ ಕಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಕಾಯ್ದೆ ಬದಲಾವಣೆ ಕಳ್ಳ ಸಂತೆಗೆ ಅನುಕೂಲ: ಶಾಸಕ ಎಚ್.ಕೆ.ಪಾಟೀಲ್

ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ವಾರದಲ್ಲಿ ಸಮಸ್ಯೆ ಬಗೆಹರಿಸಲು ಕರವೆ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.

ಗದಗ ಜಿಲ್ಲೆಯಲ್ಲಿಂದು 05 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 237…

ಲಕ್ಷ್ಮೇಶ್ವರ: ಕೊರೊನಾ ವಾರಿಯರ್ಸ್ ಗೆ ಶಿಕ್ಷಕನ ಸೇವೆ

ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.