ನವದೆಹಲಿ: ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿರುವ ಸರ್ಕಾರ, ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಸದ್ಯ ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲವು ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣ ಆಲಿಸಿದೆ.

ಮದ್ಯದಂಗಡಿ ಬಂದ್ ಮಾಡುವ ಕುರಿತು ನಾವು ಯಾವುದೇ ಆದೇಶ ನೀಡುವುದಿಲ್ಲ. ಆದರೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರಗಳು ಮದ್ಯವನ್ನು ಹೋಮ್ ಡೆಲಿವರಿ ಮೂಲಕ ಗ್ರಾಹಕರಿಗೆ ತಲುಪಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಮದ್ಯ ಮಾರಾಟ ಬಂದ್ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ನ್ಯಾಯ ಪೀಠ, ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ. ಹೀಗಾಗಿ ರಾಜ್ಯ ಸರ್ಕಾರಗಳು ಮದ್ಯದಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಜನಸಂದಣಿ ಕಡಿಮೆಗೊಳಿಸಲು ಹೋಮ್ ಡೆಲಿವರಿ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.

ಶಿವನಿಗೆ ತಲೆಯ ನೈವೇದ್ಯ ಮಾಡಲು ಪ್ರಯತ್ನಿಸಿದ ವ್ಯಕ್ತಿ!

ಲಕ್ನೋ : ವ್ಯಕ್ತಿಯೊಬ್ಬ ಶಿವನಿಗೆ ತನ್ನೇ ತಲೆಯನ್ನೇ ಅರ್ಪಿಸಿರುವ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಾಡಲು ಭಾರತೀಯ ರೈಲ್ವೆಯ ಸಿದ್ಧತೆ

ಪರಿಸರ ಮತ್ತು ಪ್ರಯಾಣಿಕ ಸ್ನೇಹಿ, ಕಡಿಮೆ ವೆಚ್ಚದಾಯಕದಂತಹ ಹಲವು ಉಪ ಕ್ರಮಗಳಾದ ಬೃಹತ್ ವಿದ್ಯುದೀಕರಣ, ನೀರು ಮತ್ತು ಕಾಗದ ಸಂರಕ್ಷಣೆಯಿಂದ ಹಿಡಿದು ರೈಲ್ವೆ ಹಳಿಗಳಲ್ಲಿ ಪ್ರಾಣಿಗಳು ಗಾಯಗೊಳ್ಳದಂತೆ ಉಳಿಸುವ ಯೋಜನೆಗಳ ಮೂಲಕ ಹಲವು ಪ್ರಮುಖ ಕ್ರಮಗಳು ಪರಿಸರ ಸ್ನೇಹಿ ಕ್ರಮಗಳನ್ನು ಭಾರತೀಯ ರೈಲ್ವೆ ಕೈಗೊಳ್ಳುತ್ತಿದೆ.