ನವದೆಹಲಿ: ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿರುವ ಸರ್ಕಾರ, ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಸದ್ಯ ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲವು ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣ ಆಲಿಸಿದೆ.

ಮದ್ಯದಂಗಡಿ ಬಂದ್ ಮಾಡುವ ಕುರಿತು ನಾವು ಯಾವುದೇ ಆದೇಶ ನೀಡುವುದಿಲ್ಲ. ಆದರೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರಗಳು ಮದ್ಯವನ್ನು ಹೋಮ್ ಡೆಲಿವರಿ ಮೂಲಕ ಗ್ರಾಹಕರಿಗೆ ತಲುಪಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಮದ್ಯ ಮಾರಾಟ ಬಂದ್ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ನ್ಯಾಯ ಪೀಠ, ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ. ಹೀಗಾಗಿ ರಾಜ್ಯ ಸರ್ಕಾರಗಳು ಮದ್ಯದಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಜನಸಂದಣಿ ಕಡಿಮೆಗೊಳಿಸಲು ಹೋಮ್ ಡೆಲಿವರಿ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ‌ಮತ್ತೊಂದು ಕೊರೊನಾ ಪಾಸಿಟಿವ್..!

ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…

ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು..

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ

ಬ್ರೆಜಿಲ್‍,ಆಫ್ರಿಕಾ ವೈರಸ್ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ; ರಾಹುಲ್‍ ಕಿಡಿ

ದೇಶದಲ್ಲಿ ಮತ್ತೆ ಏರಿಕೆಯತ್ತ ಸಾಗಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಕೇಂದ್ರ ಸರ್ಕಾರ ನಿಷ್ಕಾಳಜಿ ತೋರಿಸುತ್ತಿದೆ ಎಂದು ಕಾಂಗ್ರೆಸ್‍ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.