ಮುಂಬಯಿ: ಯುವರಾಜ್ ಸಿಂಗ್ ಬೆನ್ನಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್. ಧೋನಿ ಚೂರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ.

ಯುವರಾಜ್ ಸಿಂಗ್ ವೃತ್ತಿ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ ಈ ಇಬ್ಬರು ಆಟಗಾರರು ಬೆಂಬಲ ನೀಡಲಿಲ್ಲ. ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಮಂದಿ ಚೂರಿ ಹಾಕಿದ್ದು, ಅದರಲ್ಲಿ ಧೋನಿ, ಕೊಹ್ಲಿ ಕೂಡ ಇದ್ದಾರೆ. ಅಲ್ಲದೇ ಅಂದು ಆಯ್ಕೆ ಸಮಿತಿ ಸದಸ್ಯರಾಗಿದ್ದ ಸರಣ್ ದೀಪ್ ಸಿಂಗ್ ಕೂಡ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಯುವರಾಜ್ ಸಿಂಗ್, ಮಾಜಿ ನಾಯಕ ಸೌರವ್ ಗಂಗೂಲಿ ಅವರ ನಾಯಕತ್ವದಲ್ಲಿ ಲಭಿಸಿದ್ದ ಬೆಂಬಲ ಧೋನಿ, ಕೊಹ್ಲಿರಿಂದ ಲಭಿಸಿರಲಿಲ್ಲ ಎಂದು ಹೇಳಿದ್ದರು. ಸರಣ್ದೀವಪ್ ಸಿಂಗ್ ನಿರಂತರವಾಗಿ ಯುವಿಯನ್ನು ತಂಡದಿಂದ ಕೈಬಿಡಬೇಕು ಎಂದು ಒತ್ತಡ ಹೇರಿದ್ದರು. ಆಯ್ಕೆ ಸಮಿತಿ ಪ್ರತಿ ಸಭೆಯಲ್ಲೂ ಅವರದ್ದು ಒಂದೇ ಮಾತಾಗಿತ್ತು. ಕ್ರಿಕೆಟ್ ಕುರಿತು ಎಬಿಸಿ ಗೊತ್ತಿರದ ವ್ಯಕ್ತಿಗಳನ್ನು ಆಯ್ಕೆ ಸಮಿತಿಗೆ ತೆಗೆದುಕೊಂಡ ಸಂದರ್ಭದಲ್ಲಿ ಅವರಿಂದ ಬೇರೆ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ…

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಮಾಡುವುದು ಹೇಗೆ.?

ಗದಗ: ಹೆಸರು ಹಾಗೂ ಗೋವಿನ ಜೋಳ ಬಿತ್ತನೆಯಾಗಿದ್ದು, ಈಗಾಗಲೇ ಹೆಸರು ಹೂವಾಡುವ ಹಂತ ಹಾಗೂ ಗೋವಿನ ಜೋಳ ಸುಮಾರು 30 ರಿಂದ 40 ದಿವಸದ ಬೆಳೆ ಇರುತ್ತವೆ. ಹೆಸರು ಬೆಳೆಯಲ್ಲಿ ವಿವಿದೆಡೆ ಹಳದಿ ರೋಗ ಮತ್ತು ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೇ ಹೆಚ್ಚಿದೆ. ಗದಗ ತಾಲೂಕಿನ ಉಪ ಕೃಷಿ ನಿರ್ದೇಶಕ ವೀರೇಶ ಹುನಗುಂದ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಅಡವಿ ಸೋಮಾಪೂರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿತು. ಹೆಸರು ಬೆಳೆಯಲ್ಲಿ ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.

ಗದಗ ಜಿಲ್ಲೆಯಲ್ಲಿ 307 ಪಾಸಿಟಿವ್: ಕೊರೊನಾದಿಂದ ಮೃತರಾದವರ ವಿವರ

ಗದಗ: ಜಿಲ್ಲೆಯಲ್ಲಿ ಶನಿವಾರ 307 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 23037 ಏರಿಕೆಯಾಗಿದೆ. ಇನ್ನು ಶನಿವಾರ ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದು ಈ ಮೂಲಕ ವರೆಗೆ 241 ಜನ ಜಿಲ್ಲೆಯಲ್ಲಿ ಸಾವನ್ನಪ್ಪಿದಂತಾಗಿದೆ.