ಮುಂಬಯಿ: ಯುವರಾಜ್ ಸಿಂಗ್ ಬೆನ್ನಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್. ಧೋನಿ ಚೂರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ.

ಯುವರಾಜ್ ಸಿಂಗ್ ವೃತ್ತಿ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ ಈ ಇಬ್ಬರು ಆಟಗಾರರು ಬೆಂಬಲ ನೀಡಲಿಲ್ಲ. ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಮಂದಿ ಚೂರಿ ಹಾಕಿದ್ದು, ಅದರಲ್ಲಿ ಧೋನಿ, ಕೊಹ್ಲಿ ಕೂಡ ಇದ್ದಾರೆ. ಅಲ್ಲದೇ ಅಂದು ಆಯ್ಕೆ ಸಮಿತಿ ಸದಸ್ಯರಾಗಿದ್ದ ಸರಣ್ ದೀಪ್ ಸಿಂಗ್ ಕೂಡ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಯುವರಾಜ್ ಸಿಂಗ್, ಮಾಜಿ ನಾಯಕ ಸೌರವ್ ಗಂಗೂಲಿ ಅವರ ನಾಯಕತ್ವದಲ್ಲಿ ಲಭಿಸಿದ್ದ ಬೆಂಬಲ ಧೋನಿ, ಕೊಹ್ಲಿರಿಂದ ಲಭಿಸಿರಲಿಲ್ಲ ಎಂದು ಹೇಳಿದ್ದರು. ಸರಣ್ದೀವಪ್ ಸಿಂಗ್ ನಿರಂತರವಾಗಿ ಯುವಿಯನ್ನು ತಂಡದಿಂದ ಕೈಬಿಡಬೇಕು ಎಂದು ಒತ್ತಡ ಹೇರಿದ್ದರು. ಆಯ್ಕೆ ಸಮಿತಿ ಪ್ರತಿ ಸಭೆಯಲ್ಲೂ ಅವರದ್ದು ಒಂದೇ ಮಾತಾಗಿತ್ತು. ಕ್ರಿಕೆಟ್ ಕುರಿತು ಎಬಿಸಿ ಗೊತ್ತಿರದ ವ್ಯಕ್ತಿಗಳನ್ನು ಆಯ್ಕೆ ಸಮಿತಿಗೆ ತೆಗೆದುಕೊಂಡ ಸಂದರ್ಭದಲ್ಲಿ ಅವರಿಂದ ಬೇರೆ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190…

ಇoದು ನಿಡಗುಂದಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉತ್ತರಪ್ರಭ ಸುದ್ದಿನಿಡಗುಂದಿ: ಯುವಜನ ಸಬಲೀಕರಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಣಗೂರ ಆಶ್ರಯದಲ್ಲಿ ನಿಡಗುಂದಿ ತಾಲ್ಲೂಕು…

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…