ಮುಂಬಯಿ: ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ಈ ಮಹಿಳೆ 200 ಕಿ.ಮೀ ಕಾಲ್ನಡಿಗೆಯಲ್ಲಿಯೇ ಕ್ರಮಿಸಿದ್ದರು. ಸಾವನ್ನಪ್ಪಿರುವ ಮಹಿಳೆಯನ್ನು 21 ವರ್ಷದ ಸೋನಾಲಿ ಬುಡಾರೆ ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರದಲ್ಲಿರುವ ರತ್ನಗಿರಿಗೆ ತೆರಳಲು ಕುಟುಂಬ ಸದಸ್ಯರೊಂದಿಗೆ ಈ ಮಹಿಳೆ ಕಾಲ್ನಡಿಗೆ ಪ್ರಾರಂಭಿಸಿದ್ದರು. 230 ಕಿ.ಮೀ ಸಂಚರಿಸಿದ ನಂತರ ಕೊಂಕಣದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರತ್ನಗಿರಿಗೂ ಕೆಲವೇ ಕೆಲವು ಕಿ.ಮೀ ದೂರದಲ್ಲಿ ಸೋನಾಲಿ ಬುಡಾರೆ ಮೃತಪಟ್ಟಿದ್ದಾರೆ. ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ಊರುಗಳಿಗೆ ತೆರಳಲು ಯತ್ನಿಸಿ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಇದೇ ಮೊದಲೇನಲ್ಲ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶಗಳಲ್ಲಿಯೂ ಇಂತಹ ಘಟನೆಗಳು ವರದಿಯಾಗಿವೆ. ಇನ್ನೂ ಆಗುತ್ತಲೇ ಇವೆ.

Leave a Reply

Your email address will not be published. Required fields are marked *

You May Also Like

ಋತುಚಕ್ರದ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ ಮಾದಕ ನಟಿ!

ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಟ್ರಾಕ್ಟರ್ ಮತ್ತು ಕಾರು ಮುಖಾಮುಖಿ :ಟ್ರಾಕ್ಟರ್ ಪಿಸ್ ಪಿಸ್..!

ಉತ್ತರಪ್ರಭಗದಗ:ಟ್ರ್ಯಾಕ್ಟರ್ ಮತ್ತು ಕಾರ ನಡುವೆ ಮುಖಾಮುಖಿ ನಡೆದು ಟ್ರ್ಯಾಕ್ಟರ್ ತುಂಡಾದ ಘಟನೆ ಗದಗ ಸಮೀಪದ ಚಿಕ್ಕಟ್ಟಿ…

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.