ಮುಂಬಯಿ: ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ಈ ಮಹಿಳೆ 200 ಕಿ.ಮೀ ಕಾಲ್ನಡಿಗೆಯಲ್ಲಿಯೇ ಕ್ರಮಿಸಿದ್ದರು. ಸಾವನ್ನಪ್ಪಿರುವ ಮಹಿಳೆಯನ್ನು 21 ವರ್ಷದ ಸೋನಾಲಿ ಬುಡಾರೆ ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರದಲ್ಲಿರುವ ರತ್ನಗಿರಿಗೆ ತೆರಳಲು ಕುಟುಂಬ ಸದಸ್ಯರೊಂದಿಗೆ ಈ ಮಹಿಳೆ ಕಾಲ್ನಡಿಗೆ ಪ್ರಾರಂಭಿಸಿದ್ದರು. 230 ಕಿ.ಮೀ ಸಂಚರಿಸಿದ ನಂತರ ಕೊಂಕಣದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರತ್ನಗಿರಿಗೂ ಕೆಲವೇ ಕೆಲವು ಕಿ.ಮೀ ದೂರದಲ್ಲಿ ಸೋನಾಲಿ ಬುಡಾರೆ ಮೃತಪಟ್ಟಿದ್ದಾರೆ. ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ಊರುಗಳಿಗೆ ತೆರಳಲು ಯತ್ನಿಸಿ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಇದೇ ಮೊದಲೇನಲ್ಲ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶಗಳಲ್ಲಿಯೂ ಇಂತಹ ಘಟನೆಗಳು ವರದಿಯಾಗಿವೆ. ಇನ್ನೂ ಆಗುತ್ತಲೇ ಇವೆ.

Leave a Reply

Your email address will not be published. Required fields are marked *

You May Also Like

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…

ಕೇಸ್ ನಂ 1 ರಿಂದ ಕೊರೊನಾ ಸೋಂಕು 8 ಲಕ್ಷ ತಲುಪಿದ್ದು ಹೇಗೆ? : ಮೂರೇ ದಿನದಲ್ಲಿ 1 ಲಕ್ಷ ಹೊಸ ಪಾಸಿಟಿವ್

ನವದೆಹಲಿ: ಮೂರು ದಿನದ ಹಿಂದಷ್ಟೇ ದೇಶದಲ್ಲಿ 7 ಲಕ್ಷ ದಾಟಿದ್ದ ಕೋರೊನಾ ಸೋಂಕಿತರ ಸಂಖ್ಯೆ ಈಗ…

ರಿಷಿ ಕಪೂರ್ ಬಗ್ಗೆ ಪತ್ನಿ ಹೇಳಿದ್ದೇನು?

ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದಾರೆ. ಅವರ ಬಗ್ಗೆ ಪತ್ನಿ ನೀತು ಸಿಂಗ್ ಗುಣಗಾನ ಮಾಡಿದ್ದಾರೆ.