ಮುಂಬಯಿ: ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ಈ ಮಹಿಳೆ 200 ಕಿ.ಮೀ ಕಾಲ್ನಡಿಗೆಯಲ್ಲಿಯೇ ಕ್ರಮಿಸಿದ್ದರು. ಸಾವನ್ನಪ್ಪಿರುವ ಮಹಿಳೆಯನ್ನು 21 ವರ್ಷದ ಸೋನಾಲಿ ಬುಡಾರೆ ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರದಲ್ಲಿರುವ ರತ್ನಗಿರಿಗೆ ತೆರಳಲು ಕುಟುಂಬ ಸದಸ್ಯರೊಂದಿಗೆ ಈ ಮಹಿಳೆ ಕಾಲ್ನಡಿಗೆ ಪ್ರಾರಂಭಿಸಿದ್ದರು. 230 ಕಿ.ಮೀ ಸಂಚರಿಸಿದ ನಂತರ ಕೊಂಕಣದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರತ್ನಗಿರಿಗೂ ಕೆಲವೇ ಕೆಲವು ಕಿ.ಮೀ ದೂರದಲ್ಲಿ ಸೋನಾಲಿ ಬುಡಾರೆ ಮೃತಪಟ್ಟಿದ್ದಾರೆ. ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ಊರುಗಳಿಗೆ ತೆರಳಲು ಯತ್ನಿಸಿ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಇದೇ ಮೊದಲೇನಲ್ಲ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶಗಳಲ್ಲಿಯೂ ಇಂತಹ ಘಟನೆಗಳು ವರದಿಯಾಗಿವೆ. ಇನ್ನೂ ಆಗುತ್ತಲೇ ಇವೆ.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಗದಗ ಜಿಲ್ಲೆಯಲ್ಲಿ ಸೋಂಕು ಸರ್ವ ವ್ಯಾಪಿ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶನಿವಾರ ದಿ. 18 ರಂದು 82 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ…

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.