ನವದೆಹಲಿ: ದೇಶದಲ್ಲಿ ಕೊರೊನಾ ಪೀಡಿತ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಕೊರೊನಾವನ್ನು ನಿಯಂತ್ರಿಸಲು ಇನ್ನೂ ಆಗುತ್ತಿಲ್ಲ. ಇದು ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಪ್ರಮಾಣ ಹೆಚ್ಚಾಗುತ್ತಿದೆ. ಸದ್ಯ 56 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೊನಾ ಕಂಡು ಬಂದಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಲಾಕ್ ಡೌನ್ ನಿಂದ ಸಹಜ ಜೀವನಕ್ಕೆ ಬರುವ ಕನಸನ್ನು ತಲೆ ಕೆಳಗೆ ಮಾಡುತ್ತಿದೆ.

ಆದರೆ, ಚೇತರಿಕೆ ಕಾಣುತ್ತಿರುವ ಪ್ರಮಾಣದಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಅಲ್ಲದೇ, ಸಾವಿನ ಪ್ರಮಾಣದಲ್ಲಿಯೂ ಇಳಿಕೆ ಕಂಡು ಬಂದಿದೆ. ಲಾಕ್‌ಡೌನ್ ನಿಬಂಧನೆ ಸಡಿಲಿಕೆ ಮಾಡಿದ್ದು, ಇದಕ್ಕೆ ಕಾರಣವಿರಬಹುದು ಎಂಬ ಮಾತುಗಳು ಸದ್ಯ ಕೇಳುತ್ತಿವೆ. ಲಾಕ್‌ಡೌನ್ ಹೊರತಾಗಿಯೂ ಕೊರೊನಾ ಗ್ರಾಫ್ ಕುರಿತು ಮಾತನಾಡಿರುವ ಕೇಂದ್ರ ಸಚಿವ, ಇದುವರೆಗೆ ಸೋಂಕು ಪ್ರಕರಣ ದಾಖಲಾಗದ ಜಿಲ್ಲೆಗಳಿಗೆ ವ್ಯಾಪಿಸದಂತೆ ತಡೆ ಹಿಡಿಯುವುದು ಸವಾಲಿನ ವಿಷಯವಾಗಿದೆ. 319 ಜಿಲ್ಲೆಗಳು ಹಸಿರು ವಲಯದಲ್ಲಿ ಕಾಣಿಸಿಕೊಂಡಿವೆ. ಕೆಂಪು ವಲಯಗಳ ಜಿಲ್ಲೆಗಳ ಸಂಖ್ಯೆ 130 ಆಗಿದೆ. 284 ಜಿಲ್ಲೆಗಳು ಆರೆಂಜ್ ವಲಯದಲ್ಲಿವೆ ಎಂದು ಹೇಳಿದ್ದಾರೆ. ಈ ಪೈಕಿ 180 ಜಿಲ್ಲೆಗಳಲ್ಲಿ ಕಳೆದ ಏಳರಿಂದ 13 ದಿನಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 17,974 ಪ್ರಕರಣಗಳು ಕಂಡು ಬಂದಿವೆ. ಗುಜರಾತ್‌ನಲ್ಲಿ 7,012 ಹಾಗೂ ದೆಹಲಿಯಲ್ಲಿ 5,980 ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

You May Also Like

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಸಾರಿಗೆ ನೌಕರರಿಗೆ ಅಭದ್ರತೆ: ಉದ್ಯೋಗ ಕಡಿತಕ್ಕೆ ಸ್ವಯಂ ನಿವೃತ್ತಿಯ ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು: ಈಗಾಗಲೇ ಸಾರಿಗೆ ಇಲಾಖೆಯ 2000 ಗುತ್ತಿಗೆ ನೌಕರರನ್ನು ಮನೆಗೆ ಕಳುಹಿಸುತ್ತಿದೆ. ಇದರಿಂದ ಖಾಯಂ ನೌಕರರಿಗೂ…

ಇಂದು ಮೂರನೇ ಹಂತದ ಲಾಕ್ ಡೌನ್ ಅಂತ್ಯ – ನಾಳೆಯಿಂದ ಹೇಗಿರಲಿದೆ ರಾಜ್ಯ?

ಇಂದು ಮೂರನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದೆ. ನಾಳೆಯಿಂದ ಹೊಸ ಸ್ವರೂಪದಲ್ಲಿ ಲಾಕ್ಡೌನ್ ಜಾರಿಯಾಗಲಿದೆ.

ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ

ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.