ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅಲ್ಲದೇ, ಶೀಘ್ರದಲ್ಲಿಯೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಹೆಚ್ಚುವರಿ ಶೈಕ್ಷಣಿಕ ಚಟುವಟಿಕೆಗಳು ಇರುವುದಿಲ್ಲ. ಸೀಮಿತ ಅವಧಿಯಲ್ಲಿ ಯಾವ ಯಾವ ಚಟುವಟಿಕೆಗಳನ್ನು ಕೈಗೊಳ್ಳುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಗಿದ ಕೂಡಲೇ ಸಿಇಟಿ ಪರೀಕ್ಷೆಗಳನ್ನು ನಡೆಸಿ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.

ಚಸ್ ಅಲ್ಲೋ ಮಾರಾಯ ಚೀಯರ್ಸ್ ಅನ್ನು ಶು..!! ಇಂಗ್ಲೀಷ್ ಬ್ಯಾಡ ಕನ್ನಡದಾಗ ಹೇಳು..!

ಶು..!, ಕರ್ನಾಟಕದಾಗ ಹುಟ್ಟಿ ಚೆಸ್ ಅಂತ ಇಂಗ್ಲೀಷ್ ನ್ಯಾಗ್ ಹೇಳ ಬ್ಯಾಡ್ರಿ ಅಂದ, ಕನ್ನಡಾಭಿಮಾನಿಗಳು ಯಾರಾದ್ರು ಕೇಳಿಸಿಕೊಂಡ್ರ ಕುಡುಕರೆಲ್ಲ ಕನ್ನಡ ಬಿಟ್ಟು ಇಂಗ್ಲೀಷ್ ಮಾತಾಡಾಕತ್ಯಾರ ಅಂತ ಸ್ಟ್ರೈಕ್ ಮಾಡಿ ಬಾರ್ ಬಂದ್ ಮಾಡಿಸಿಗಿಡಿಸ್ಯಾರೋ ಮಾರಾಯ್ರ.

ಅಭಿನವ ಅನ್ನದಾನ ಶ್ರೀ ಗಳ ದರ್ಶನ ಪಡೆದ ಸಿಎಂ ಬೊಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.

ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷರಾಗಿ ಸೋಮಣ್ಣ ಬೆಟಗೇರಿ ನೇಮಕ

ಲಕ್ಷ್ಮೇಶ್ವರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಹಕ್ಕುಗಳು ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ರಾಜ್ಯ ಆರೋಗ್ಯ ಘಟಕ…