ಬೆಂಗಳೂರು: ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ.

ರಾಜ್ಯ ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಇಲಾಖೆ ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಂಗಳೂರಿನಲ್ಲಿ 7 (ಶಿವಾಜಿ ನಗರ 4, ಪಾದರಾಯನಪುರ 2), ಬೆಳಗಾವಿಯಲ್ಲಿ 11, ದಾವಣಗೆರೆಯಲ್ಲಿ 13, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 5 ತಿಂಗಳ ಕಂದಮ್ಮ ಹಾಗೂ 3 ವರ್ಷದ ಬಾಲಕಿ ಸೇರಿ 12, ಚಿತ್ರದುರ್ಗದಲ್ಲಿ ಮೂವರು ಹಾಗೂ ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಇಂದು 10 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೀಟರ್ ಬಡ್ಡಿಗೆ ಬ್ರೆಕ್ ಹಾಕಲು ಮುಂದಾದ ಸರ್ಕಾರ

ಈ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಒಂದು ವೇಳ ತಿದ್ದುಪಡಿಯಾಗಿ, ಜಾರಿಗೆ ಬಂದ್ರೆ, ಬಲವಂತವಾಗಿ ಸಾಲ ವಸೂಲಾತಿಗೆ ಬ್ರೇಕ್ ಬೀಳಲಿದೆ.

ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ

ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂದು ಕೊರೊನಾಗೆ 3 ಬಲಿ – ಸೋಂಕಿತರ ಸಂಖ್ಯೆ 135

ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ.

ಗದಗ ಜಿಲ್ಲೆಯಲ್ಲಿ 73 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.