ಧಾರವಾಡದ ಸೋಂಕಿತ ವ್ಯಕ್ತಿಯಿಂದ ವೈದ್ಯರಿಗೂ ಶುರುವಾಗಿದೆ ಸಂಕಷ್ಟ!

ಧಾರವಾಡ : ಹೊಸಯಲ್ಲಾಪುರ ಬಳಿಯ ಕೋಳಿಕೆರೆ ಪ್ರದೇಶದಲ್ಲಿನ ವ್ಯಕ್ತಿಗೆ ಕೊರೊನಾ ಸೋಂಕು ನಿನ್ನೆ ಕಂಡು ಬಂದಿದ್ದು, ಜಿಲ್ಲಾಡಳಿತ ಆ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದೆ.

ಸೋಂಕಿತ ವ್ಯಕ್ತಿ ಮಾ. 5 ರಿಂದ 9 ರ ವರೆಗೆ ನಗರದ ಶ್ರವ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಮಾ. 9 ರಿಂದ 17ರ ವರೆಗೆ ನಗರದ ಸಪ್ತಾಪುರದಲ್ಲಿನ ಸ್ಪಂದನಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದಾನೆ.

ಏಪ್ರೀಲ್ 30 ರಂದು ಹಾಗೂ ಮೇ.1 ರಂದು ಜಿಲ್ಲಾಸ್ಪತ್ರೆಗೆ ಹೋಗಿದ್ದಾನೆ. ಮೇ.1 ರಂದು ಪುನಃ ಚಿಕಿತ್ಸೆಗಾಗಿ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಮರಳಿ ಅಲ್ಲಿಂದ ಅದೇ ದಿನ ಹುಬ್ಬಳ್ಳಿಯ ಕಿಮ್ಸ್ ಗೆ ಚಿಕಿತ್ಸೆಗೆಂದು ದಾಖಲಾಗಿದ್ದಾನೆ. ಈ ಸಂದರ್ಭದಲ್ಲಿ ಆತನಲ್ಲಿ ಸೋಂಕು ಇರುವುದು ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೂ ಸಂಕಷ್ಟ ಶುರುವಾಗಿದೆ. ಈ ವ್ಯಕ್ತಿ ಕಳೆದ ತಿಂಗಳಿನಲ್ಲಿ ಹೊಸಯಲ್ಲಾಪುರ, ಶೀಲವಂತರ ಓಣಿ, ಮುರುಘಾಮಠ, ಕೊಪ್ಪದಕೆರೆ, ಎಂ.ಬಿ.ನಗರ ಹಾಗೂ ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಸಂಚರಿಸಿರುವುದು ತಿಳಿದು ಬಂದಿದೆ.

Exit mobile version