ಹುಬ್ಬಳ್ಳಿ: ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು,ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕಿಮ್ಸ್ ಆಸ್ಪತ್ರೆಯ ವೈದ್ಯರು ಗರ್ಭಿಣಿ ಸಂಬಂಧಿಕರ ಒಪ್ಪಿಗೆಯ ಹಾಗೂ ತಜ್ಞರ ಸಲಹೆ ಮೇರೆಗೆ ಯಶಸ್ವಿಯಾಗಿ ಗರ್ಭಪಾತ ಮಾಡಿಸಿದ್ದಾರೆ‌.

ಇಲ್ಲಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ಗರ್ಭಿಣಿಗೆ ಗರ್ಭಪಾತ ಮಾಡಲಾಗಿದೆ. ಮಹಿಳೆ ಆರೋಗ್ಯ ಸ್ಥಿರವಾಗಿದೆ. ಢಾಣಕಶಿರೂರ ಮೂಲದ 23 ವರ್ಷದ ಈ ಮಹಿಳೆ ಕೊರೋನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದಳು. ಅಲ್ಲದೆ ದೇಹದಲ್ಲಿ ಸೋಡಿಯಮ್ ಅಂಶ ಕಡಿಮೆಯಾಗಿ ಸುಸ್ತಾಗಿದ್ದಳು.

ಅಲ್ಸರ್ ಉಂಟಾಗಿ ಊಟ ಮಾಡಲು ಆಗುತ್ತಿರಲಿಲ್ಲ, ಹಿಮೋಗ್ಲೋಬಿನ್ ಕಡಿಮೆಯಾಗಿ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆ ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಮಹಿಳೆ ಕುಟುಂಬಕ್ಕೆ ಅಗತ್ಯತೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮಾತ್ರೆಗಳನ್ನು ನೀಡುವ ಮೂಲಕ ಗರ್ಭಪಾತ ಮಾಡಲಾಗಿದೆ. ಮಹಿಳೆ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅಧಿಕಾರ ಇಲ್ಲವಂತೆ!

ಮೈಸೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ. ಅದರ ಬಗ್ಗೆ ಮಾತನಾಡಿದರೆ,…

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ಎಸ್‌ಡಿಎಂಸಿ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು : ಪಿ.ಸಿ.ಜೋಗರೆಡ್ಡಿ

ಶಾಲಾ ಮೇಲುಸ್ತುವಾರಿ ಸಮಿತಿ ಆಡಳಿತದಲ್ಲಿ ಶಾಲೆಯ ಅಭಿವೃದ್ಧಿ ಅಡಗಿದೆ ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಮದ್ಯೆ ಎಸ್‌ಡಿಎಂಸಿ ಸೇತುವೆಯಾಗಿಕಾರ್ಯ ನಿರ್ವಹಿಸಬೇಕಿದೆ ಎಂದು ಸಿಆರ್‌ಪಿ ಪಿ.ಸಿ.ಜೋಗರೆಡ್ಡಿ ಹೇಳಿದರು.