ಬೆಂಗಳೂರು : ಕ್ವಾರೆಂಟೈನ್ ಮುಗಿಸಿ ಬಂದ 419 ವ್ಯಕ್ತಿಯಿಂದಾಗಿ ಬೆಂಗಳೂರಿನಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ನಿನ್ನೆ ಈ ವ್ಯಕ್ತಿ ಐಸಿಯುನಲ್ಲಿಯೇ ಇದ್ದಾನೆ ಎಂದು ಹೇಳಲಾಗಿತ್ತು. ಅಲ್ಲದೇ, ಇಂದು ಆತನ ಬಿಡುಗಡೆ ಕುರಿತು ಕೂಡ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಆತ ಮಧ್ಯರಾತ್ರಿ ಏಕಾಏಕಿ ಹೊಂಗಸಂದ್ರದ ತನ್ನ ಮನೆಯ ಮುಂದೆ ಕಂಡಿದ್ದಾನೆ. ಅದೂ ಆಸ್ಪತ್ರೆಯಲ್ಲಿ ಹಾಕಿರುವ ಬಟ್ಟೆಯ ಸಮೇತ ಆತ ಕಾಣಿಸಿಕೊಂಡಿದ್ದಾನೆ. ಆತನನ್ನು ಕಂಡ ಕೂಡಲೇ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆ ನಂತರ ಆತನನ್ನು ಹೊಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಯಿತು.

ಆಸ್ಪತ್ರೆಯ ಸಿಬ್ಬಂದಿ ಮಾತ್ರ ಸದ್ಯ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಉನ್ನತ ಅಧಿಕಾರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗೆ ಆ ವ್ಯಕ್ತಿಯ ಡಿಸ್ಚಾರ್ಜ್ ಬಗ್ಗೆ ಮಾಹಿತಿ ಕೇಳಿದೆ. ಇದರಿಂದಾಗಿ ಹಲವು ಅನುಮಾನಗಳು ದಾರಿ ಮಾಡಿ ಕೊಡುತ್ತಿವೆ.

ನಿಯಮದಂತೆ ಒಬ್ಬ ವ್ಯಕ್ತಿ ಗುಣಮುಖನಾದರೆ, ಆತನನ್ನು ಆತನ ಮನೆಗೆ ವೈದ್ಯಕೀಯ ಸಿಬ್ಬಂದಿ ಹಾಗೂ ಬಿಬಿಎಂಪಿ ಸಿಬ್ಬಂದಿ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಿ ಮನೆಗೆ ತಲುಪಿಸಬೇಕು. ಅಲ್ಲದೇ, ಕಡ್ಡಾಯವಾಗಿ ಆ ವ್ಯಕ್ತಿಗೆ 14 ದಿನಗಳ ಕಾಲ ಕ್ವಾರಂಟೈನ್ ವಿಧಿಸಬೇಕು. ಸ್ಥಳೀಯರ ಪ್ರಕಾರ ಹೊಂಗಸಂದ್ರದಲ್ಲಿ ವಾಸವಿರುವ ಈ ವ್ಯಕ್ತಿಗೆ ಸ್ವಂತ ಮನೆಯಿಲ್ಲ.  ಹೀಗಾಗಿ ಆತನನ್ನು ಇಲ್ಲಿಗೆ ಬಿಬಿಎಂಪಿ ಹಾಗೂ ವೈದ್ಯಕೀಯ ಸಿಬ್ಬಂದಿ ಕರೆದುಕೊಂಡು ಬರಲೇಬಾರದು. ಅಲ್ಲದೇ, ಆ ವ್ಯಕ್ತಿ ಐಸಿಯುನಲ್ಲಿನ ಬಟ್ಟೆಯನ್ನೇ ತೊಟ್ಟು ಬಂದಿದ್ದಾನೆ. ಇದರಿಂದಾಗಿ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…

ಸೋಂಕಿನಿಂದ ಗುಣಮುಖರಾದವರಲ್ಲಿಯೂ ಕಂಡು ಬರುತ್ತಿದೆ ಮಹಾಮಾರಿ!

ಬೆಂಗಳೂರು : ಮಹಾಮಾರಿ ಸೋಂಕಿಗೆ ಬಲಿಯಾಗಿ ಗುಣಮುಖರಾದವರಲ್ಲಿ ಅನಾರೋಗ್ಯ ಕಂಡು ಬರುತ್ತಿದೆ. ಈ ರೀತಿಯ ಬಹುತೇಕ ಜನರಲ್ಲಿ ಕಂಡು ಬಂದಿರುವುದು ಬೆಳಕಿಗೆ ಬರುತ್ತಿದೆ. ಅಲ್ಲದೇ, ಸದ್ಯ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ.

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.

ಯುವಕರಲ್ಲಿ ಆತ್ಮಸ್ಥೈರ್ಯ ಕುಗ್ಗಿಸಿದ ಬಿಜೆಪಿ : ರಾಮಕೃಷ್ಣ ದೊಡ್ಡಮನಿ

ಈಗಿನ ಯುವಕರಲ್ಲಿ ಆತ್ಮಸ್ಥೆರ್ಯ ಕುಗ್ಗಿಹೋಗಿದೆ. ಅವರಲ್ಲಿ ಆತ್ಮಸ್ಥೆರ್ಯ ತುಂಬಿದರೆ ನೀರುದ್ಯೋಗದ ಸಮಸ್ಯೆ ಬಗೆಹರಿಸಬಹುದಾಗಿತ್ತು. ಆದರೆ ಬಿಜೆಪಿಯವರು ಇವು ಯಾವುದೆ ಕೆಲಸ ಮಾಡಿಲ್ಲ ಅನೇಕ ಯುವಕರು ನೀರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಎದುರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.