ಧಾರವಾಡ : ಸರ್ಕಾರಿ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರೊನಾ ವಿರುದ್ಧ ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ವೈದ್ಯರು ತಮ್ಮ ವೃತ್ತಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಕೆಪಿಎಂಇ ಕಾಯ್ದೆ ಅಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೊರೊನಾ ಅಲ್ಲದ ಇನ್ನಿತರ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಖಾಸಗಿ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಮತ್ತು ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಶೀಘ್ರದಲ್ಲೇ ಸಭೆ ನಡೆಸಿ ಚಿಕಿತ್ಸೆ ನೀಡದ ಖಾಸಗಿ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಂಡಕ್ಟರ್- ಡ್ರೈವರ್ ಗಳಿಗೆ ವೇತನ ರಹಿತ ರಜೆಗೆ ಚಿಂತನೆ?

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಬಸ್ ಸಂಚಾರ ಈಗಷ್ಟೆ ಆರಂಭವಾಗಿದೆ. ಆದರೆ ಪ್ರಯಾಣಿಕರು…

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??

ಗಣೇಶ ಸಂಭ್ರಮ- ಸಾಂಸ್ಕೃತಿಕ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ಇಲ್ಲಿನ ವಿವಿಧ ಬಡಾವಣೆಯಲ್ಲಿ ಗಣೇಶ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಲ ಗಜಾನನ ಯುವಕ…

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ.