ಬೆಂಗಳೂರು: ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಇತ್ತಿಚೆಗಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾ ಸಂಬಂಧ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ. ಇದರಿಂದ ನಿತ್ಯ ಸರ್ಕಾರದ ಮೇಲೆ ಎಷ್ಟು ಹೊರೆ ಬೀಳುತ್ತದೆ ಎನ್ನುವುದು ಕುತೂಹಲ.  

ರಾಜ್ಯ ಸರ್ಕಾರದಿಂದ ಒಬ್ಬ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಖರ್ಚು ಮಾಡುತ್ತಿರುವ ವೆಚ್ಚ 3,48,885 ರೂ ಆಗಿದೆ. ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಬಿಎಂಸಿ ಕಾಲೇಜಿನ ಸೋಂಕಿತರ ಚಿಕಿತ್ಸೆ ರಫ್ ಸ್ಕೆಚ್ ಮೂಲಕ ಸಚಿವ ಸುರೇಶ್ ಕುಮಾರ್ ಈ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಅಂದರೆ ಮೇ.8ರವರೆಗೆ, 4,74,48,390 ರೂಪಾಯಿ ಹಣ ಇದುವರೆಗೆ ಕೊರೋನಾ ಸೋಂಕಿತರಿಗಾಗಿ ಖರ್ಚಾಗಿದೆ.

ಇದರಲ್ಲಿ ಸೋಂಕು ನಿಯಂತ್ರಣ ಸಲಕರಣೆಗಾಗಿ 89 ಲಕ್ಷ, ಆಸ್ಪತ್ರೆಯಲ್ಲಿ ವಾರ್ಡ್ ನಿರ್ಮಾಣಕ್ಕಾಗಿ 60 ಲಕ್ಷ, ಈ ಹಣವನ್ನು 136 ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಹಂಚಿಕೆಯನ್ನಾಗಿ ವಿಭಾಗಿಸಿದಾಗ, ಒಬ್ಬ ಕೊರೋನಾ ಸೋಂಕಿತನಿಗೆ 3,48,885 ರೂಪಾಯಿ ಖರ್ಚು ಮಾಡಲಾಗಿದೆ ಎಂಬುದಾಗಿ ತಿಳಿಸಿದರು. ಇದು ಕೇವಲ ಬಿಎಂಸಿ ಕಾಲೇಜಿನಲ್ಲಿನ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಖರ್ಚು ಮಾಡಿದಂತ ವೆಚ್ಚವಾಗಿದೆ. ಹೀಗಾಗಿ ರಾಜ್ಯದಲ್ಲಿ ಇತರೆಡೆ ಆಯಾ ಜಿಲ್ಲಾಢಳಿತದ ಮೂಲಕ ಕೊರೋನಾ ಚಿಕಿತ್ಸೆಗಾಗಿ ಹಣ ಖರ್ಚು ಮಾಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಕಳ್ಳಬಟ್ಟಿ ಸಾರಾಯಿ ಮಾರಾಟ ಆರೋಪ ಮಲ್ಲಸಮುದ್ರ ಬಳಿ ಓರ್ವನ ಬಂಧನ

ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ಚರ್ಚ್, ಮಸೀದಿಗಳಲ್ಲಿ ದೀಪ ಬೆಳಗಿಸಿ; ದಿಪಾವಳಿ ಆಚರಿಸಿ- ರಾಜು ಖಾನಪ್ಪನವರ

ಶಾಂತಿ, ಕೋಮು ಸೌಹಾರ್ಧತೆಗೆ ಜಿಲ್ಲೆ ಹೆಸರುವಾಸಿಯಾಗಿದೆ. ಇಂತಹ ಸೌಹಾರ್ಧ ತಾಣದಲ್ಲಿ ದೀಪಾವಳಿ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸೋಣ. ಹೀಗಾಗಿ ಚರ್ಚ್, ದರ್ಗಾ ಮಸೀದಿಗಳಲ್ಲಿ ದೀಪ ಬೆಳಗಿಸುವ ಮೂಲಕ ನಾಡಿನಲ್ಲಿ ಕೋಮು ಸೌಹಾರ್ದತೆ ಬಲಪಡಿಸಲು ಮುಂದಾಗೋಣ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.

ಪೊಲೀಸ್ ಸಬ್ ಇನ್ಸ್ಪೆಕ್ಟರ್ 545 ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿವಿಲ್ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್ (ಕೆಪಿಎಸ್) ಅರ್ಜಿ ಆಹ್ವಾನಿಸಿದೆ.

ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ

ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮಂಗಳೂರಿನಲ್ಲಿ ಹೆಸರು ಮಾಡಿರುವ, ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.