ಬೆಂಗಳೂರು: ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಇತ್ತಿಚೆಗಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾ ಸಂಬಂಧ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ. ಇದರಿಂದ ನಿತ್ಯ ಸರ್ಕಾರದ ಮೇಲೆ ಎಷ್ಟು ಹೊರೆ ಬೀಳುತ್ತದೆ ಎನ್ನುವುದು ಕುತೂಹಲ.  

ರಾಜ್ಯ ಸರ್ಕಾರದಿಂದ ಒಬ್ಬ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಖರ್ಚು ಮಾಡುತ್ತಿರುವ ವೆಚ್ಚ 3,48,885 ರೂ ಆಗಿದೆ. ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಬಿಎಂಸಿ ಕಾಲೇಜಿನ ಸೋಂಕಿತರ ಚಿಕಿತ್ಸೆ ರಫ್ ಸ್ಕೆಚ್ ಮೂಲಕ ಸಚಿವ ಸುರೇಶ್ ಕುಮಾರ್ ಈ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಅಂದರೆ ಮೇ.8ರವರೆಗೆ, 4,74,48,390 ರೂಪಾಯಿ ಹಣ ಇದುವರೆಗೆ ಕೊರೋನಾ ಸೋಂಕಿತರಿಗಾಗಿ ಖರ್ಚಾಗಿದೆ.

ಇದರಲ್ಲಿ ಸೋಂಕು ನಿಯಂತ್ರಣ ಸಲಕರಣೆಗಾಗಿ 89 ಲಕ್ಷ, ಆಸ್ಪತ್ರೆಯಲ್ಲಿ ವಾರ್ಡ್ ನಿರ್ಮಾಣಕ್ಕಾಗಿ 60 ಲಕ್ಷ, ಈ ಹಣವನ್ನು 136 ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಹಂಚಿಕೆಯನ್ನಾಗಿ ವಿಭಾಗಿಸಿದಾಗ, ಒಬ್ಬ ಕೊರೋನಾ ಸೋಂಕಿತನಿಗೆ 3,48,885 ರೂಪಾಯಿ ಖರ್ಚು ಮಾಡಲಾಗಿದೆ ಎಂಬುದಾಗಿ ತಿಳಿಸಿದರು. ಇದು ಕೇವಲ ಬಿಎಂಸಿ ಕಾಲೇಜಿನಲ್ಲಿನ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಖರ್ಚು ಮಾಡಿದಂತ ವೆಚ್ಚವಾಗಿದೆ. ಹೀಗಾಗಿ ರಾಜ್ಯದಲ್ಲಿ ಇತರೆಡೆ ಆಯಾ ಜಿಲ್ಲಾಢಳಿತದ ಮೂಲಕ ಕೊರೋನಾ ಚಿಕಿತ್ಸೆಗಾಗಿ ಹಣ ಖರ್ಚು ಮಾಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಏಳು ಲಕ್ಷದೊಂದಿಗೆ ಕೆಲಸಗಾರ ನಾಪತ್ತೆ ; ಮಾಲಿಕನಿಂದ ದೂರು

ಗದಗ: ಬ್ಯಾಂಕಿಗೆ ಹಣ ಕಟ್ಟಿಬಾ ಅಂತಾ ಕಳಿಸಿದ ಮಾಲಿಕನ ಲಕ್ಷಾಂತರ ರೂಪಾಯಿಯೊಂದಿಗೆ ಕೆಲಸಗಾರ ನಾಪತ್ತೆಯಾಗಿದ್ದಾನೆ ಎನ್ನುವ…

ಈ ವರ್ಷ ಮುಂಗಾರು ಮಳೆ ರಾಜ್ಯವನ್ನು ಯಾವಾಗ ಪ್ರವೇಶಿಸಲಿದೆ ಗೊತ್ತಾ?

ನೈರುತ್ಯ ಮುಂಗಾರು ಮಳೆ ಜೂ. 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಸ್ತೂರಿ ರಂಗನ್ ವರದಿ: ಭಿನ್ನಾಭಿಪ್ರಾಯ ದಾಖಲಿಸಿದ ಬಿ.ಎಸ್.ವೈ.

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ…

ಸಾಧಕಿ ಸುಧಾಮೂರ್ತಿಗೆ ಮುತ್ತಗಿ ಗ್ರಾಮಸ್ತರಿಂದ ಸಂಮಾನ..!

ಉತ್ತರಪ್ರಭ ಸುದ್ದಿ ಆಲಮಟ್ಟಿ:2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ…