ಮುಂಬಯಿ: ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಈ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿಯೇ 748 ಹೊಸ ಪ್ರಕರಣಗಳು ವರದಿಯಾಗಿದ್ದು, ಮಹಾ ರಾಜಧಾನಿಯ ಸೋಂಕಿತರ ಸಂಖ್ಯೆ 11,967ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಮಹಾಮಾರಿಗೆ ಮತ್ತೆ 25 ಜನ ಬಲಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಬಯಿನಲ್ಲಿ ಸಾವಿನ ಸಂಖ್ಯೆ 462ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಒಟ್ಟು 35 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಮುಳಗುಂದ ಅಬ್ಬಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸಯೋಗದಲ್ಲಿ ಕೆರೆ ಅಭಿವೃದ್ದಿಗೆ ಸಲಹೆ.

ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು. ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.