ಬಾಗಲಕೋಟೆ : ಕೊರೊನಾ ಮಹಾಮಾರಿಯನ್ನು ಹೊಡೆದೊಡಿಸಲು ಪಣತೊಟ್ಟಿರುವ ವೈದ್ಯರು ಸದ್ಯ ತಮ್ಮ ಕುಟುಂಬವನ್ನೇ ಮರೆತಿದ್ದಾರೆ. ಈ ಯುದ್ಧದಲ್ಲಿ ತಿಂಗಳುಗಟ್ಟಲೇ ಪತ್ನಿ, ಮಕ್ಕಳು ತಂದೆ ತಾಯಿಯಿಂದ ದೂರವಿರುವ ಇಲ್ಲಿಯ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡಲು ವಿಡಿಯೋ ಕಾಲ್ ಮಾಡಿ ಕುಶಲೋಪರಿ ವಿಚಾರಿಸಿದರು.

ಕೊರೊನಾ ಆಸ್ಪತ್ರೆಯಲ್ಲಿ ನೂಡಲ್ ಅಧಿಕಾರಿಯಾಗಿರುವ ಚಂದ್ರಕಾಂತ ಜವಳಿ ಕಳೆದ ಒಂದೂವರೆ ತಿಂಗಳಿಂದ ಕೊರೊನಾ ಪ್ರಕರಣಗಳ ಮಾಹಿತಿ ಅಂಕಿ ಅಂಶ ದಾಖಲಾತಿ ಕಾರ್ಯ ನಿಭಾಯಿಸುತ್ತಿದ್ದಾರೆ. ಹೀಗಾಗಿ ಗುಳೇದಗುಡ್ಡ ಪಟ್ಟಣದಲ್ಲಿರುವ ತಂದೆ, ತಾಯಿ, ಪತ್ನಿ ಮಕ್ಕಳ ಭೇಟಿ ಮಾಡಿಲ್ಲ. ಕೊರೊನಾ ಕರ್ತವ್ಯದಲ್ಲಿರುವ ವೈದ್ಯ ಚಂದ್ರಕಾಂತ ಕುಟುಂಬ ಜೊತೆಗಿನ ಸಂಭ್ರಮ ತ್ಯಾಗ ಮಾಡಿದ್ದಾರೆ. ಕುಟುಂಬಸ್ಥರಿಂದ ದೂರ ಇರುವ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ.

ಪತ್ನಿ, ಮಕ್ಕಳು, ತಂದೆ, ತಾಯಿ ಜೊತೆ ಮಾತನಾಡಿದ್ದು, ಕೆಲ ಕಾಲ ಮಾತನಾಡುವ ಮೂಲಕ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ. ಈ ವೇಳೆ ಮಕ್ಕಳು ಮನೆಗೆ ಬಾ ಎಂದು ಕರೆದಿದ್ದು, ಕೊರೊನಾ ಹಾವಳಿ ಮುಗಿದ ನಂತರ ಬರುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

Leave a Reply

Your email address will not be published. Required fields are marked *

You May Also Like

ಕ್ರೇಜಿಸ್ಟಾರ್ ರವಿಚಂದ್ರನ್‌ಗೆ 60ನೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಚಿತ್ರರಂಗದ ಬಣ್ಣದ ಲೋಕದಲ್ಲೇ ಕನಸು ಕಟ್ಟಿಕೊಂಡ ಕನಸುಗಾರ ವಿ.ರವಿಚಂದ್ರನ್ ಅವರಿಗೆ ಇಂದು 60 ನೆ ವರ್ಷದ ಹುಟ್ಟುಹಬ್ಬದ ಸಂಭ್ರಮ. ತಮ್ಮ ನೆಚ್ಚಿನ ನಟನ ಷಷ್ಠಿ ಪೂರ್ತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಬೇಕು ಎಂದು ರವಿಚಂದ್ರನ್ ಅಭಿಮಾನಿಗಳು ಕನಸು ಕಟ್ಟಿಕೊಂಡಿದ್ದರಾದರೂ ಅವರ ಕನಸಿಗೆ ಕೊರೊನಾ ಮಹಾಮಾರಿ ತಣ್ಣಿರೆರಚಿರುವುದರಿಂದ ತಾವು ಇದ್ದಲ್ಲಿಯೇ ಸರಳವಾಗಿ ಆಚರಿಸಿದ್ದಾರೆ.

ಸಮಸ್ಯೆಗಳ ಕುರಿತು ಪ್ರತ್ಯೇಕ ಸಾರಿಗೆ ಇಲಾಖೆಯ ಸಹಾಯವಾಣಿ : ಲಕ್ಷ್ಮಣ ಸವದಿ

ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ

ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ 

ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.