ಬಾಗಲಕೋಟೆ : ಕೊರೊನಾ ಮಹಾಮಾರಿಯನ್ನು ಹೊಡೆದೊಡಿಸಲು ಪಣತೊಟ್ಟಿರುವ ವೈದ್ಯರು ಸದ್ಯ ತಮ್ಮ ಕುಟುಂಬವನ್ನೇ ಮರೆತಿದ್ದಾರೆ. ಈ ಯುದ್ಧದಲ್ಲಿ ತಿಂಗಳುಗಟ್ಟಲೇ ಪತ್ನಿ, ಮಕ್ಕಳು ತಂದೆ ತಾಯಿಯಿಂದ ದೂರವಿರುವ ಇಲ್ಲಿಯ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡಲು ವಿಡಿಯೋ ಕಾಲ್ ಮಾಡಿ ಕುಶಲೋಪರಿ ವಿಚಾರಿಸಿದರು.

ಕೊರೊನಾ ಆಸ್ಪತ್ರೆಯಲ್ಲಿ ನೂಡಲ್ ಅಧಿಕಾರಿಯಾಗಿರುವ ಚಂದ್ರಕಾಂತ ಜವಳಿ ಕಳೆದ ಒಂದೂವರೆ ತಿಂಗಳಿಂದ ಕೊರೊನಾ ಪ್ರಕರಣಗಳ ಮಾಹಿತಿ ಅಂಕಿ ಅಂಶ ದಾಖಲಾತಿ ಕಾರ್ಯ ನಿಭಾಯಿಸುತ್ತಿದ್ದಾರೆ. ಹೀಗಾಗಿ ಗುಳೇದಗುಡ್ಡ ಪಟ್ಟಣದಲ್ಲಿರುವ ತಂದೆ, ತಾಯಿ, ಪತ್ನಿ ಮಕ್ಕಳ ಭೇಟಿ ಮಾಡಿಲ್ಲ. ಕೊರೊನಾ ಕರ್ತವ್ಯದಲ್ಲಿರುವ ವೈದ್ಯ ಚಂದ್ರಕಾಂತ ಕುಟುಂಬ ಜೊತೆಗಿನ ಸಂಭ್ರಮ ತ್ಯಾಗ ಮಾಡಿದ್ದಾರೆ. ಕುಟುಂಬಸ್ಥರಿಂದ ದೂರ ಇರುವ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ.

ಪತ್ನಿ, ಮಕ್ಕಳು, ತಂದೆ, ತಾಯಿ ಜೊತೆ ಮಾತನಾಡಿದ್ದು, ಕೆಲ ಕಾಲ ಮಾತನಾಡುವ ಮೂಲಕ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ. ಈ ವೇಳೆ ಮಕ್ಕಳು ಮನೆಗೆ ಬಾ ಎಂದು ಕರೆದಿದ್ದು, ಕೊರೊನಾ ಹಾವಳಿ ಮುಗಿದ ನಂತರ ಬರುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

Leave a Reply

Your email address will not be published. Required fields are marked *

You May Also Like

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನರಾಗಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೇಟ್ ಆಟಗಾರನಿಗೆ ಕೊರೋನಾ ಪಾಸಿಟಿವ್..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಬಂದ ಮೂರನೇ ಕ್ರಿಕೆಟ್ ಆಟಗಾರ ಸೋಲೋ ಆಗಿದ್ದಾರೆ.