ಬೆಂಗಳೂರು: ನಗರದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ಮಧ್ಯಾಹ್ನ ಪಾದರಾಯನಪುರದ ಗರ್ಭಿಣಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಅದೇ ವ್ಯಾಪ್ತಿಯ ಮತ್ತೊಬ್ಬ ಗರ್ಭಿಣಿಗೆ ಸೋಂಕು ಕಾಣಿಸಿಕೊಂಡಿದೆ. ಪಾದರಾಯನಪುರ 10ನೇ ಕ್ರಾಸ್ ನಿವಾಸಿ 19 ವರ್ಷದ 8 ತಿಂಗಳು ಗರ್ಭಿಣಿಗೆ ಸೋಂಕು ತಗುಲಿದೆ. ಮಹಿಳೆಯ ಪತಿ (ರೋಗಿ 706)ಗೆ ಸಾಮೂಹಿಕ ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿದ್ದು ಪತ್ತೆಯಾಗಿತ್ತು. ಪತಿಯ ಸಂಪರ್ಕದಲ್ಲಿದ್ದರಿಂದಾಗಿ ಸೋಂಕು ತಗುಲಿದೆ. ಮಹಿಳೆ ಹೊಟ್ಟೆ ನೋವು ಎಂದು ನಗರದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಿಳೆಯ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು. ಇದೀಗೆ ಮಹಿಳೆಗೆ ಕೊರೊನಾ ತಗುಲಿದ್ದು ಖಚಿತವಾಗಿದೆ. ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ ಎಷ್ಟು ಗೊತ್ತಾ?

ಅಮೆರಿಕಾ ರಾಷ್ಟ್ರದಲ್ಲಿ ವೈರಸ್ ನಿಯಂತ್ರಮಕ್ಕೆ ಬರುವ ಬೆಳವಣಿಗೆಗಳು ಕಂಡು ಬರುತ್ತಿದೆ ಎಂಬ ಭರವಸೆಗಳು ಜನರಲ್ಲಿ ಮೂಡುತ್ತಿರುವ ನಡುವಲ್ಲೇ ಇದೀಗ ಮತ್ತೆ ಅಮೆರಿಕಾದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ.

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…