ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ತಂದ ಸಂಕಷ್ಟದ ಎರಡು ಘಟನೆಗಳನ್ನು ಹೇಳಿದ್ದಾರೆ. ಬೆಂಗಳೂರಿನ ಓರ್ವ ಯುವತಿ ಎಂ.ಟೆಕ್ ನಂತರ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ 2017 ರಲ್ಲಿ ಹೊರದೇಶಕ್ಕೆ ಹೋಗಿದ್ದಾರೆ.‌ ಆ ಹೆಚ್ಚಿನ ಶಿಕ್ಷಣ ಮುಗಿಸಿದ ನಂತರ ಅಲ್ಲಿ ಒಳ್ಳೆಯ ಕೆಲಸವೂ ಸಿಕ್ಕಿದೆ. ಸದ್ಯ ಆ ಯುವತಿಗೆ ಬ್ಲಡ್ ಕ್ಯಾನ್ಸರ್ ಬಂದು ಅಪ್ಪಳಿಸಿದೆ. ಅಲ್ಲಿನ ಡಾಕ್ಟರ್ ಗಳು ಕೈ ಚಲ್ಲಿದ್ದಾರೆ. ಸದ್ಯ ನಿಮ್ಮ ದೇಶಕ್ಕೆ ಹೋಗಿ ಎಂದು ಹೇಳುತ್ತಿದ್ದಾರೆ. ಆ ಮಹಿಳೆ ಅಲ್ಲಿಂದ ಬರಬೇಕೆಂದರೆ ವಿಮಾನದಲ್ಲಿಯೇ ಬರಬೇಕು. ಆಕೆಯ ಇಲ್ಲಿನ ಬಂಧುಗಳು ನನಗೆ ತಿಳಿಸಿದಂತೆ ಇನ್ನು ಏಳು ದಿನಗಳೊಳಗೆ ಆಕೆ ವಿಮಾನ ಹತ್ತಿ ಬರಬೇಕು. ಇಲ್ಲದಿದ್ದರೆ ಆಕೆಯ ರೋಗ ನಿರೋಧಕ ಶಕ್ತಿ (immunity) ತೀರಾ ಕ್ಷೀಣವಾಗುತ್ತದೆ. ನಾನು ಕೇಂದ್ರ ಸಚಿವ ಸದಾನಂದ ಗೌಡರ ಜೊತೆ ಮಾತನಾಡಿ, ವಿದೇಶಾಂಗ ಸಚಿವಾಲಯದ‌ ಮೂಲಕ ಈಕೆಗೆ ನೆರವು ಯಾಚಿಸಿದ್ದೇನೆ.‌ ಅವರು ಪೂರ್ಣ ವಿವರ ಕೇಳಿದ್ದಾರೆ. ಈಗ ಅದನ್ನೂ ಕಳಿಸಿದ್ದೇನೆ. ಒಂದು ತೊಂದರೆಯೆಂದರೆ, ಅಲ್ಲಿಂದ ಭಾರತಕ್ಕೆ ನೇರ ಫ್ಲೈಟ್ ಇಲ್ಲವಂತೆ.

ಇನ್ನೊಂದು ಘಟನೆಯಲ್ಲಿ, ನಮ್ಮ ಕ್ಷೇತ್ರದ ಜಡ್ಜಸ್ ಕಾಲೋನಿಯಲ್ಲಿ 91 ವರ್ಷದ ನಿವೃತ್ತ ನ್ಯಾಯಮೂರ್ತಿ ಶ್ಯಾಮಯ್ಯಂಗಾರ್ ನಿನ್ನೆ ರಾತ್ರಿ ತೀರಿಕೊಂಡರು.‌ ಅವರಿಬ್ಬರು ಮಕ್ಕಳು ಅಮೆರಿಕಾದಲ್ಲಿದ್ದಾರೆ. ಸದ್ಯಕ್ಕೆ ಬರಲು ಸಾಧ್ಯವೇ ಇಲ್ಲ. ಹನ್ನೊಂದು ತಿಂಗಳ ಹಿಂದೆ ಶಾಮಯ್ಯಂಗಾರ್ ರವರ ಪತ್ನಿ ತೀರಿಕೊಂಡಾಗಲೂ ಆ ಮಕ್ಕಳು ಬರಲಾಗಿರಲಿಲ್ಲ. ಈಗ ತಂದೆಯ ಅಂತಿಮ ಕ್ರಿಯೆ ನಡೆಸಬೇಕಿದ್ದವರು Skype ಮೂಲಕ ಅಂತಿಮ ಕ್ರಿಯೆಯನ್ನು ನೋಡಬೇಕಾಗಿದೆ. ಈ ರೀತಿ ಬರೆದುಕೊಳ್ಳುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೆಂಪುರಾಜನಿಗೆ ಡಿಮ್ಯಾಂಡಪ್ಪೂ..ಡಿಮ್ಯಾಂಡು! ಬೆಳೆ ಇತ್ತು ಬೆಲೆ ಇರಲಿಲ್ಲ, ಈಗ ಬೆಳೆ ಇಲ್ಲ ಬೆಲೆ ಇದೆ…!

ಸುರೇಶ್ ಎಸ್.ಲಮಾಣಿ ಲಕ್ಷ್ಮೇಶ್ವರ: ಅತಿವೃಷ್ಟಿ ಮತ್ತು ಅನಾವೃಷ್ಟಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಜೀವನದುದ್ದಕ್ಕೂ ಕಂಬದ ಪೆಟ್ಟು…

ಗೋರ ಸೇನಾ ಸಂಘಟನೇ ವತಿಯಿಂದ ಪ್ರತಿಭಟನೆ- ಸಂಗೂರ ಸಕ್ಕರೆ ಕಾರ್ಖಾನೆ:ಲಾರಿ ಹಾಯ್ದು ಒರ್ವ ಕಾರ್ಮೀಕ ಸಾವೂ, ಇಬ್ಬರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿ ಹಾವೇರಿ: ಹಾವೇರಿ ಜಿಲ್ಲೆಯ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ದಿನಾಂಕ:09.01.2022 ರಾತ್ರಿ 2.00 ಗಂಟೆ…