ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.

ಸದ್ಯ ಐದೂವರೆ ತಿಂಗಳ ಮಗುವಿನಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇಡೀ ಭಟ್ಕಳ ನಗರವನ್ನು ಸೀಲ್ಡೌತನ್ ಮಾಡಲಾಗಿದೆ. ಸದ್ಯ ಭಟ್ಕಳ ಹಾಟ್ ಸ್ಪಾಟ್ ತಾಣವಾಗಿದೆ. ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ ಕಂಡಿದೆ.

ಭಟ್ಕಳದಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬದಿಂದಲೇ ಈ ಕೇಸ್ ಪತ್ತೆಯಾಗಿವೆ. ಮೇ. 5ರಂದು ಪಟ್ಟಣದ ಮದೀನಾ ಕಾಲೋನಿಯ 18 ವರ್ಷದ ಯುವತಿ ರೋಗಿ ನಂಬರ್ 659ರಿಂದಲೇ 12 ಜನರಿಗೆ ಸೋಂಕು ತಗುಲಿದೆ. ಯುವತಿಯ ಕುಟುಂಬದ 10 ಜನ ಹಾಗೂ ಪಕ್ಕದ ಮನೆಯ ಮಹಿಳೆ ಮತ್ತು ಅವರ ಸ್ನೇಹಿತೆಗೆ ಸೋಂಕು ತಗುಲಿದೆ.

ಹೀಗಾಗಿ ಮದೀನ ಕಾಲೋನಿಯನ್ನು ಹಾಟ್ಸ್ಪಾ ಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ. ನಗರವನ್ನು 5 ವಲಯಗಳಾಗಿ ವಿಂಗಡಿಸಿ ಪ್ರತಿ ವಲಯಕ್ಕೆ ಓರ್ವ ಪೊಲೀಸ್ ಅಧಿಕಾರಿ ಹಾಗೂ ವಲಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇಂದಿನಿಂದ ಭಟ್ಕಳದಲ್ಲಿ ಖಾಸಗಿ ವೈದ್ಯಕೀಯ ಸೇವೆ, ಮೆಡಿಕಲ್, ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ ಎಂದು ಡಿಸಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.

ಹಿಟ್ಲರ್ ಟೀಸರ್ 1 ಮಿಲಿಯನ್ ವೀಕ್ಷಣೆ

ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಡ್ರಗ್ಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ ರುದ್ರಪ್ಪ ಲಮಾಣಿ!

ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕೊಪ್ಪಳದಲ್ಲೂ ಕೊರೋನಾ ಸಪ್ಪಳ: ಮೂರು ಪಾಸಿಟಿವ್ ದೃಢ

ಕೊಪ್ಪಳ: ಈವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದೇ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಆದರೆ ಇದೀಗ…