ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.

ಸದ್ಯ ಐದೂವರೆ ತಿಂಗಳ ಮಗುವಿನಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇಡೀ ಭಟ್ಕಳ ನಗರವನ್ನು ಸೀಲ್ಡೌತನ್ ಮಾಡಲಾಗಿದೆ. ಸದ್ಯ ಭಟ್ಕಳ ಹಾಟ್ ಸ್ಪಾಟ್ ತಾಣವಾಗಿದೆ. ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ ಕಂಡಿದೆ.

ಭಟ್ಕಳದಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬದಿಂದಲೇ ಈ ಕೇಸ್ ಪತ್ತೆಯಾಗಿವೆ. ಮೇ. 5ರಂದು ಪಟ್ಟಣದ ಮದೀನಾ ಕಾಲೋನಿಯ 18 ವರ್ಷದ ಯುವತಿ ರೋಗಿ ನಂಬರ್ 659ರಿಂದಲೇ 12 ಜನರಿಗೆ ಸೋಂಕು ತಗುಲಿದೆ. ಯುವತಿಯ ಕುಟುಂಬದ 10 ಜನ ಹಾಗೂ ಪಕ್ಕದ ಮನೆಯ ಮಹಿಳೆ ಮತ್ತು ಅವರ ಸ್ನೇಹಿತೆಗೆ ಸೋಂಕು ತಗುಲಿದೆ.

ಹೀಗಾಗಿ ಮದೀನ ಕಾಲೋನಿಯನ್ನು ಹಾಟ್ಸ್ಪಾ ಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ. ನಗರವನ್ನು 5 ವಲಯಗಳಾಗಿ ವಿಂಗಡಿಸಿ ಪ್ರತಿ ವಲಯಕ್ಕೆ ಓರ್ವ ಪೊಲೀಸ್ ಅಧಿಕಾರಿ ಹಾಗೂ ವಲಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇಂದಿನಿಂದ ಭಟ್ಕಳದಲ್ಲಿ ಖಾಸಗಿ ವೈದ್ಯಕೀಯ ಸೇವೆ, ಮೆಡಿಕಲ್, ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ ಎಂದು ಡಿಸಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ

ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ.

ಭಾರಿ ಮಳೆಗೆ ಬೆಂಗಳೂರಿನಲ್ಲಾದ ಅನಾಹುತಗಳು..!

ಬೆಂಗಳೂರು: ನಗರದಲ್ಲಿ ಉತ್ತಮ ಮಳೆ ಸುರಿದಿದ್ದು, ಇಂದು ಸುರಿದ ಮಳೆಗೆ ಉದ್ಯಾನ ನಗರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.…

ಪಕ್ಷದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆದಿರುವ ಬಿ.ಎಸ್. ಯಡಿಯೂರಪ್ಪ

ಆಲಮಟ್ಟಿ:ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ…

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…