ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.

ಸದ್ಯ ಐದೂವರೆ ತಿಂಗಳ ಮಗುವಿನಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇಡೀ ಭಟ್ಕಳ ನಗರವನ್ನು ಸೀಲ್ಡೌತನ್ ಮಾಡಲಾಗಿದೆ. ಸದ್ಯ ಭಟ್ಕಳ ಹಾಟ್ ಸ್ಪಾಟ್ ತಾಣವಾಗಿದೆ. ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ ಕಂಡಿದೆ.

ಭಟ್ಕಳದಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬದಿಂದಲೇ ಈ ಕೇಸ್ ಪತ್ತೆಯಾಗಿವೆ. ಮೇ. 5ರಂದು ಪಟ್ಟಣದ ಮದೀನಾ ಕಾಲೋನಿಯ 18 ವರ್ಷದ ಯುವತಿ ರೋಗಿ ನಂಬರ್ 659ರಿಂದಲೇ 12 ಜನರಿಗೆ ಸೋಂಕು ತಗುಲಿದೆ. ಯುವತಿಯ ಕುಟುಂಬದ 10 ಜನ ಹಾಗೂ ಪಕ್ಕದ ಮನೆಯ ಮಹಿಳೆ ಮತ್ತು ಅವರ ಸ್ನೇಹಿತೆಗೆ ಸೋಂಕು ತಗುಲಿದೆ.

ಹೀಗಾಗಿ ಮದೀನ ಕಾಲೋನಿಯನ್ನು ಹಾಟ್ಸ್ಪಾ ಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ. ನಗರವನ್ನು 5 ವಲಯಗಳಾಗಿ ವಿಂಗಡಿಸಿ ಪ್ರತಿ ವಲಯಕ್ಕೆ ಓರ್ವ ಪೊಲೀಸ್ ಅಧಿಕಾರಿ ಹಾಗೂ ವಲಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇಂದಿನಿಂದ ಭಟ್ಕಳದಲ್ಲಿ ಖಾಸಗಿ ವೈದ್ಯಕೀಯ ಸೇವೆ, ಮೆಡಿಕಲ್, ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ ಎಂದು ಡಿಸಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ಬಿಹಾರದಲ್ಲಿ ಕ್ವಾರಂಟೈನ್ ಆದವರಿಗೆ ಕಾಂಡೋಮ್ ಉಚಿತ..!

ಕ್ವಾರಂಟೈನ್ ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿರುವ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ ಳನ್ನು ಉಚಿತವಾಗಿ ನೀಡಿದೆ.

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ನರೇಗಲ್ಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.