ಬೆಂಗಳೂರು : ಇಲ್ಲಿಯ ಹೊಂಗಸಂದ್ರದಲ್ಲಿನ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಿಹಾರಿ ಕೂಲಿ ಕಾರ್ಮಿಕನಿಂದ 29 ಜನರಿಗೆ ಸೋಂಕು ಹರಡಿತ್ತು. ಕೆಲವು ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಹೊಂಗಸಂದ್ರ ಸಹಜ ಸ್ಥಿತಿಯತ್ತ ಸಾಗುತ್ತಿದೆ ಎನ್ನುವಷ್ಟರಲ್ಲಿಯೇ ಕ್ವಾರಂಟೈನ್ ಮಾಡಿದ್ದವರಲ್ಲಿ ಬರೋಬ್ಬರಿ ಐದು ಜನರಿಗೆ ಸೊಂಕು ಪತ್ತೆಯಾಗಿದೆ. ಇದರಿಂದ ಮತ್ತೆ ಹೊಂಗಸಂದ್ರದಲ್ಲಿ ಭೀತಿ ಎದುರಾಗಿದೆ.

ಬಿಹಾರಿ ಕೂಲಿ ಕಾರ್ಮಿಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 184 ಜನರನ್ನು ಹೊಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರನ್ನು 14 ದಿನಗಳು ಕ್ವಾರಂಟೈನ್ ಮುಗಿದ ನಂತರ ಮತ್ತೆ ಟೆಸ್ಟ್ ಗೆ ಒಳಪಡಿಸಿದ್ದಾರೆ. ಈ ಟೆಸ್ಟ್ ನಲ್ಲಿ ಐವರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕು ಪತ್ತೆಯಾದ ಐದು ಜನರಲ್ಲಿ ಒಬ್ಬರು ಅಲ್ಲಿನ ಸ್ಥಳೀಯರು, ಮೂವರು ಕೂಲಿ ಕಾರ್ಮಿಕರು ಮತ್ತು ಒಬ್ಬರು ಕನ್ನಡಿಗರಿದ್ದಾರೆ. ಸದ್ಯ ಇವರ ಸಂಪರ್ಕದಲ್ಲಿರುವ ಜನರನ್ನು ಪತ್ತೆ ಹಚ್ಚಿ ಟೆಸ್ಟ್ ಗೆ ಒಳಪಡಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಶಾಲಾ ಕಾಲೇಜುಗಳಿಗೆ 12 ರಿಂದ 16ರ ವರೆಗೆ ರಾಜ್ಯ ಸರ್ಕಾರ ರಜೆ ಘೋಷಣೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ,…

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.