ಬೆಂಗಳೂರು : ಇಲ್ಲಿಯ ಹೊಂಗಸಂದ್ರದಲ್ಲಿನ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಿಹಾರಿ ಕೂಲಿ ಕಾರ್ಮಿಕನಿಂದ 29 ಜನರಿಗೆ ಸೋಂಕು ಹರಡಿತ್ತು. ಕೆಲವು ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಹೊಂಗಸಂದ್ರ ಸಹಜ ಸ್ಥಿತಿಯತ್ತ ಸಾಗುತ್ತಿದೆ ಎನ್ನುವಷ್ಟರಲ್ಲಿಯೇ ಕ್ವಾರಂಟೈನ್ ಮಾಡಿದ್ದವರಲ್ಲಿ ಬರೋಬ್ಬರಿ ಐದು ಜನರಿಗೆ ಸೊಂಕು ಪತ್ತೆಯಾಗಿದೆ. ಇದರಿಂದ ಮತ್ತೆ ಹೊಂಗಸಂದ್ರದಲ್ಲಿ ಭೀತಿ ಎದುರಾಗಿದೆ.

ಬಿಹಾರಿ ಕೂಲಿ ಕಾರ್ಮಿಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 184 ಜನರನ್ನು ಹೊಟೇಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರನ್ನು 14 ದಿನಗಳು ಕ್ವಾರಂಟೈನ್ ಮುಗಿದ ನಂತರ ಮತ್ತೆ ಟೆಸ್ಟ್ ಗೆ ಒಳಪಡಿಸಿದ್ದಾರೆ. ಈ ಟೆಸ್ಟ್ ನಲ್ಲಿ ಐವರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕು ಪತ್ತೆಯಾದ ಐದು ಜನರಲ್ಲಿ ಒಬ್ಬರು ಅಲ್ಲಿನ ಸ್ಥಳೀಯರು, ಮೂವರು ಕೂಲಿ ಕಾರ್ಮಿಕರು ಮತ್ತು ಒಬ್ಬರು ಕನ್ನಡಿಗರಿದ್ದಾರೆ. ಸದ್ಯ ಇವರ ಸಂಪರ್ಕದಲ್ಲಿರುವ ಜನರನ್ನು ಪತ್ತೆ ಹಚ್ಚಿ ಟೆಸ್ಟ್ ಗೆ ಒಳಪಡಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಗದಗ: ಜಿಮ್ಸ್ ನಲ್ಲಿ ರೋಗಿ ಆತ್ಮಹತ್ಯೆ..!

ಲಿವರ್ ವೈಫಲ್ಯದಿಂದ ಬಳಲುತ್ತಿರುವ ರೋಗಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಹತ್ಯೆ!

ಮಂಡ್ಯ : ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!

ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.