ಹೊಸದಿಲ್ಲಿ: ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಅವರ ಅನಾರೋಗ್ಯದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಈ ಮೂಲಕ ಉತ್ತರ ನೀದ್ದಾರೆ. ಈಗಾಗಲೇ ನನ್ನ ಆರೋಗ್ಯ ವಿಚಾರವಾಗಿ ಸುಳ್ಳು ಸುದ್ದಿಗಳು ಹಲವು ದಿನಗಳಿಂದ ಹರದಾಡುತ್ತಿವೆ. ಇನ್ನು ಕೆಲವರು ನನ್ನ ಸಾವಿನ ಬಗ್ಗೆ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಅಮಿತ್ ಶಾ ತಮ್ಮ ಆರೋಗ್ಯದ ಕುರಿತು ಮಾಡಿರುವ ಟ್ವೀಟ್

ಈಗಾಗಲೇ ಇಡೀ ದೇಶ ಕೊರೋನಾ ಸೋಂಕಿನ ಭಯದ ನೆರಳಲ್ಲಿದೆ. ದೇಶದ ಒಬ್ಬ ಮಂತ್ರಿ ಸ್ಥಾನದಲ್ಲಿರುವ ನಾನು ನನ್ನ ಬಗ್ಗೆ ಹಬ್ಬಿರುವ ಸುಳ್ಳು ವಂದಂತಿ ಬಗ್ಗೆ ಕಾಳಜಿ ವಹಿಸಿಲ್ಲ. ಹಗಲಿರುಳು ಕೊರೋನಾ ಸೋಂಕಿನಿಂದ ಆಗುತ್ತಿರುವ ತೊಂದರೆ ನಿವಾರಣೆಯಲ್ಲಿ ನನ್ನನ್ನು ನಾನು ಹೆಚ್ಚು ತೊಡಗಿಸಿಕೊಂಡಿದ್ದೇನೆ. ಆದರೆ ಬಹಳಷ್ಟು ಜನರು ತಮ್ಮ ಕಾಲ್ಪನಿಕ ಯೋಚನೆಯಿಂದ ಆನಂದ ಪಡುತ್ತಿದ್ದಾರೆ ಎನ್ನುವುದು ತಿಳಿಯಿತು. ಆದರೆ ಕಳೆದ ಎರಡು ದಿನಗಳಿಂದ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ನನ್ನ ಹಿತ ಚಿಂತಕರು ಈ ಬಗ್ಗೆ ಬಹಳಷ್ಟು ಚಿಂತೆಗೊಳಗಾಗಿದ್ದರು. ಈ ಕಾರಣದಿಂದಾಗಿ ನನ್ನ ಜನರ ಆತಂಕ ದೂರ ಮಾಡುವ ಉದ್ದೇಶದಿಂದ ನನ್ನ ಆರೋಗ್ಯದ ಬಗ್ಗೆ ಹಬ್ಬಿರುವ ವದಂತಿ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇನೆ.

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆಯಿಂದ ಬಳಲುತ್ತಿಲ್ಲ. ಹಾಗೂ ನನ್ನ ಆರೋಗ್ಯದ ಕುರಿತು ಹರಿಬಿಡಲಾಗಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಬಿಜೆಪಿಯ ಕಾರ್ಯಕರ್ತರು ಹಾಗೂ ಅವರ ಹಿತೈಶಿಗಳಲ್ಲಿ ಅಮಿತ್ ಶಾ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ 59 ಲಕ್ಷದ ಗಡಿ ದಾಟಿದ ಮಹಾಮಾರಿ!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಗದಗ ಜಿಲ್ಲೆಯಲ್ಲಿಂದು 6 ಕಂಟೇನ್ ಮೆಂಟ್ ಪ್ರದೇಶ ನಿರ್ಭಂಧ ತೆರವು

ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ…

ಲಡಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ತಲುಪಿದ ಪರಿಸ್ಥಿತಿ!

ನವದೆಹಲಿ: ಲಡಾಕ್ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.ಚೀನಾ ದೇಶದ ಸೇನೆಯೊಂದಿಗೆ ಗಡಿಯಲ್ಲಿ ಸೇನೆಯ ನಿಲುಗಡೆ ಮತ್ತು ಅಲ್ಲಿನ…

ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ…